ರಾಜ್ಯದ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆಯೇನೋ ಅನಿಸುತ್ತದೆ.
‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು 187 ಕೋಟಿ ರೂ. ಹಗರಣ ಅಲ್ಲ. ಅಲ್ಲಿಂದ ಕೇವಲ 87 ಕೋಟಿ ರೂ. ಮಾತ್ರ ಬೇರೆ ಕಡೆ ವರ್ಗಾವಣೆ ಆಗಿದೆ’ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಿಧಾನಸಭೆ ಅಧಿವೇಶನದಲ್ಲಿ ಹೇಳಿದ್ದಾರೆ. ಅವರ ಈ ಮಾತು ಪರೋಕ್ಷವಾಗಿ ಹಗರಣ ನಡೆದಿರುವುದನ್ನು ಒಪ್ಪಿಕೊಂಡಂತಿದೆ.
ಇನ್ನು ಮುಡಾ ಹಗರಣದಲ್ಲಿಯೂ ಸ್ವತಃ ಮುಖ್ಯಮಂತ್ರಿ ಸಿದ್ದರಾಮ ಯ್ಯನವರೇ ಆರೋಪಿ ಸ್ಥಾನದಲ್ಲಿದ್ದಾರೆ. ತಮ್ಮ ಪತ್ನಿಯ ಹೆಸರಿಗೆ ನಿವೇಶನಗಳು ನೋಂದಣಿ ಮಾಡಿಸಿಕೊಂಡಿರುವ ಆರೋಪ ಅವರ ಮೇಲಿದೆ. ಆದರೆ ಅವರು, ‘ನಾನು ಈ ವಿಚಾರದಲ್ಲಿ ತಪ್ಪಿತಸ್ಥನಲ್ಲ’ ಎಂದು ಸಮರ್ಥಿಸಿಕೊಳ್ಳಲು ಹೋಗಿ ಮತ್ತಷ್ಟು ಗೋಜಲಿಗೆ ಸಿಲುಕಿಕೊಂಡಿದ್ದಾರೆ.
ಈ ಮುಡಾ ಹಗರಣದಲ್ಲಿ ಎಲ್ಲ ರಾಜಕೀಯ ಪಕ್ಷಗಳ ನಾಯಕರೂ ‘ಸಮಾನ ಫಲಾನುಭವಿಗಳು.’ ಆದರೆ ಒಬ್ಬರ ಮೇಲೊಬ್ಬರು ಆರೋಪ- ಪ್ರತ್ಯಾರೋಪಗಳನ್ನು ಮಾಡಿಕೊಂಡು ಸಾರ್ವಜನಿಕರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಈ ಬೆಳವಣಿಗಗಳು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವರ್ಚಸ್ಸನ್ನು ಕುಗ್ಗಿಸುತ್ತಿವೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…