ಓದುಗರ ಪತ್ರ

ಓದುಗರ ಪತ್ರ| ಕಾಂಗ್ರೆಸ್ ಸರ್ಕಾರದ ವರ್ಚಸ್ಸು ಕ್ಷೀಣಿಸುತ್ತಿದೆಯೇ?

ರಾಜ್ಯದ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆಯೇನೋ ಅನಿಸುತ್ತದೆ.

‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು 187 ಕೋಟಿ ರೂ. ಹಗರಣ ಅಲ್ಲ. ಅಲ್ಲಿಂದ ಕೇವಲ 87 ಕೋಟಿ ರೂ. ಮಾತ್ರ ಬೇರೆ ಕಡೆ ವರ್ಗಾವಣೆ ಆಗಿದೆ’ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಿಧಾನಸಭೆ ಅಧಿವೇಶನದಲ್ಲಿ ಹೇಳಿದ್ದಾರೆ. ಅವರ ಈ ಮಾತು ಪರೋಕ್ಷವಾಗಿ ಹಗರಣ ನಡೆದಿರುವುದನ್ನು ಒಪ್ಪಿಕೊಂಡಂತಿದೆ.

ಇನ್ನು ಮುಡಾ ಹಗರಣದಲ್ಲಿಯೂ ಸ್ವತಃ ಮುಖ್ಯಮಂತ್ರಿ ಸಿದ್ದರಾಮ ಯ್ಯನವರೇ ಆರೋಪಿ ಸ್ಥಾನದಲ್ಲಿದ್ದಾರೆ. ತಮ್ಮ ಪತ್ನಿಯ ಹೆಸರಿಗೆ ನಿವೇಶನಗಳು ನೋಂದಣಿ ಮಾಡಿಸಿಕೊಂಡಿರುವ ಆರೋಪ ಅವರ ಮೇಲಿದೆ. ಆದರೆ ಅವರು, ‘ನಾನು ಈ ವಿಚಾರದಲ್ಲಿ ತಪ್ಪಿತಸ್ಥನಲ್ಲ’ ಎಂದು ಸಮರ್ಥಿಸಿಕೊಳ್ಳಲು ಹೋಗಿ ಮತ್ತಷ್ಟು ಗೋಜಲಿಗೆ ಸಿಲುಕಿಕೊಂಡಿದ್ದಾರೆ.

ಈ ಮುಡಾ ಹಗರಣದಲ್ಲಿ ಎಲ್ಲ ರಾಜಕೀಯ ಪಕ್ಷಗಳ ನಾಯಕರೂ ‘ಸಮಾನ ಫಲಾನುಭವಿಗಳು.’ ಆದರೆ ಒಬ್ಬರ ಮೇಲೊಬ್ಬರು ಆರೋಪ- ಪ್ರತ್ಯಾರೋಪಗಳನ್ನು ಮಾಡಿಕೊಂಡು ಸಾರ್ವಜನಿಕರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಈ ಬೆಳವಣಿಗಗಳು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವರ್ಚಸ್ಸನ್ನು ಕುಗ್ಗಿಸುತ್ತಿವೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago