ಓದುಗರ ಪತ್ರ

ಓದುಗರ ಪತ್ರ| ಕನ್ನಡ ಚಿತ್ರರಂಗಕ್ಕೆ ಕೃತಜ್ಞತೆ ಇದೆಯೇ?

ಡಾ.ಪಿ.ವಿ.ನಾಗರಾಜುರವರು ತಮ್ಮ ಸಂಶೋಧನಾ ಪ್ರಬಂಧವನ್ನು ‘ಹಚ್ಚೇವು ಕನ್ನಡದ ದೀಪ’ ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾ ರೆಂಬುದಾಗಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಲೇಖನವೊಂದು ಪ್ರಕಟಗೊಂಡಿದ್ದು, ಪಿ.ವಿ.ನಾಗರಾಜುರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

‘ಕರ್ನಾಟಕ ರಾಜ್ಯವು ರೂಪುಗೊಳ್ಳುವಲ್ಲಿ, ರೂಪುಗೊಂಡ ಬಳಿಕ ತನ್ನ ಚಹರೆಯನ್ನು
ರೂಪಿಸಿಕೊಳ್ಳುವಲ್ಲಿ ಚಲನಚಿತ್ರೋದ್ಯಮವು ಹೇಗೆ ಉಪಕರಣವಾಗಿ ದುಡಿದಿದೆ’ ಎಂಬ ಚರಿತ್ರೆಯನ್ನು ಹಿಡಿದಿಡಲು ಯತ್ನಿಸಿರುವುದು ಈ ಮಹಾಪ್ರಬಂಧದಲ್ಲಿ ದಾಖಲಾಗಿದೆ ಎಂಬುದಾಗಿ ಲೇಖಕ ಡಾ.ರಹಮತ್ ತರೀಕೆರೆ ತಿಳಿಸಿದ್ದಾರೆ. ಕರ್ನಾಟಕದ ಅಸ್ಥಿತೆಯನ್ನು ಕೇಂದ್ರವಾಗಿಟ್ಟುಕೊಂಡು ಹಾಡುಗಳನ್ನು ವಿಶ್ಲೇಷಿಸಿದ್ದಾರೆ ಎಂಬುದಾಗಿಯೂ ಅವರು ಉಲ್ಲೇಖಿಸಿರುವುದು ಕುತೂಹಲದಾಯಕವಾದ ವಿಷಯ.

ಕನ್ನಡ ಚಿತ್ರರಂಗವನ್ನು ಬೆಳೆಸಿದ್ದು ಕನ್ನಡ ಚಳವಳಿಗಳು ಎಂದರೆ ತಪ್ಪಾಗಲಾರದು. ವರ್ಷಕ್ಕೆ 6-7 ಕನ್ನಡ ಚಿತ್ರಗಳು ನಿರ್ಮಾಣವಾಗುತ್ತಿದ್ದ ದಯನೀಯ ಸ್ಥಿತಿಯಲ್ಲಿ ಆರಂಭವಾದ ಈ ಕನ್ನಡ ಚಳವಳಿಯ ಉದ್ದಕ್ಕೂ ಕನ್ನಡ ಚಿತ್ರಗಳನ್ನು ನೋಡಬೇಕು, ಪರಭಾಷೆಯ ಚಿತ್ರಗಳ ಡಬ್ಬಿಂಗ್ ನಿಲ್ಲಬೇಕು, ಚಿತ್ರೋದ್ಯಮ ಕರ್ನಾಟಕದಲ್ಲಿ (ಆಗ ಮೈಸೂರು ರಾಜ್ಯ) ನೆಲೆ ನಿಲ್ಲಬೇಕು, ಸರ್ಕಾರ ಚಿತ್ರೋದ್ಯಮಕ್ಕೆ ನೆರವು ನೀಡಬೇಕು ಎಂಬ ಬೇಡಿಕೆಗಳನ್ನು ಕನ್ನಡ ಪರ ಚಳವಳಿಗಾರರಾದ ಕೋಣಂದೂರು ಲಿಂಗಪ್ಪ, ಅನಕೃ, ನಾಡಿಗೇರ ಕೃಷ್ಣರಾಯ, ಮ.ರಾಮಮೂರ್ತಿ, ಎಂ.ಎಸ್.ನಟರಾಜನ್, ಅನಂತರದ ದಿವಸಗಳಲ್ಲಿ ವಾಟಾಳ್ ನಾಗರಾಜ್ ಬಲವಾಗಿ ಪ್ರತಿಪಾದಿಸಿದರು. ಇದರಿಂದಾಗಿ ಕನ್ನಡ ಚಿತ್ರಗಳ ನಿರ್ಮಾಣ ಹೆಚ್ಚಾದವು. ಕಾದಂಬರಿಗಳ ಆಧಾರದ ಮೇಲೆ ಚಲನಚಿತ್ರಗಳು ತಯಾರಾದವು. ಸಬ್ಸಿಡಿ ಯೋಜನೆ ಬಂತು. ಅನೇಕ ಲೇಖಕರು ಚಿತ್ರಗಳತ್ತ ಗಮನಹರಿಸಿದರು.

ಕನ್ನಡ ಚಲನಚಿತ್ರಗಳನ್ನು ಈ ಚಳವಳಿಗಳ ಹಿನ್ನೆಲೆಯಲ್ಲಿ ಹಲವು ಸಲ ನೋಡಿದವರನ್ನೂ ನಾನು ಬಲ್ಲೆ. ಬೆಂಗಳೂರಿನ ಮೆಜೆಸ್ಟಿಕ್ ಪ್ರದೇಶದಲ್ಲಿ ಯಾವ ಚಿತ್ರ ಮಂದಿರವೂ ಕನ್ನಡ ಚಿತ್ರ ಪ್ರದರ್ಶಿಸುತ್ತಿರಲಿಲ್ಲ. ಅದಕ್ಕೆ ಹೋರಾಟ ಮಾಡಿ, ಜಿ.ವಿ.ಅಯ್ಯರ್ ಅವರ ‘ಬಂಗಾರಿ’ (ಕೃಷ್ಣಮೂರ್ತಿ ಪುರಾಣಿಕರ ದೇವರಕೂಸು) ಮೊತ್ತ ಮೊದಲ ಬಾರಿಗೆ ಅಲಂಕಾ‌ ಚಿತ್ರಮಂದಿರದಲ್ಲಿ ಬಿಡುಗಡೆಯಾಯಿತು.

ಈಗಿನ ಚೆನ್ನೈನಲ್ಲಿ ಚಿತ್ರೀಕರಣಕ್ಕೆ ಅನುಭವಿಸುತ್ತಿದ್ದ ಸಂಕಟ ನಿವಾರಣೆಗೆ ಬಾಲಕೃಷ್ಣ ‘ಅಭಿಮಾನ್’ ಸ್ಟುಡಿಯೋಗೆ ಪ್ರಯತ್ನ ಶುರುಮಾಡಿದರು. ಇದರಿಂದಾಗಿ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ ಆರು ಫೋರುಗಳಲ್ಲಿ ಚಿತ್ರೀಕರಣ ನಡೆಯುವಂತಾಯಿತು. ಭಾರತೀಯ ಚಲನಚಿತ್ರರಂಗ ಕನ್ನಡದತ್ತ ನೋಡುವಂತಾಯಿತು. ಆದರೆ ಕನ್ನಡ ಚಿತ್ರರಂಗಕ್ಕೆ ಆ ನೆನಪು ಮತ್ತು ಕೃತಜ್ಞತೆ ಇದೆಯೇ?

-ಕೆ.ವೆಂಕಟರಾಜು, ಚಾಮರಾಜನಗರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

10 mins ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

19 mins ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

33 mins ago

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…

1 hour ago

ಕೋಲಾರದಲ್ಲಿ ದೇಶದ ಮೊದಲ ಹೆಲಿಕಾಪ್ಟರ್‌ ತಯಾರಕ ಘಟಕ : ನಾಳೆ ಮೋದಿ-ಮ್ಯಾಕ್ರಾಂ ಚಾಲನೆ

ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…

2 hours ago

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

2 hours ago