ಓದುಗರ ಪತ್ರ

ಓದುಗರ ಪತ್ರ| ಕನ್ನಡ ಚಿತ್ರರಂಗಕ್ಕೆ ಕೃತಜ್ಞತೆ ಇದೆಯೇ?

ಡಾ.ಪಿ.ವಿ.ನಾಗರಾಜುರವರು ತಮ್ಮ ಸಂಶೋಧನಾ ಪ್ರಬಂಧವನ್ನು ‘ಹಚ್ಚೇವು ಕನ್ನಡದ ದೀಪ’ ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾ ರೆಂಬುದಾಗಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಲೇಖನವೊಂದು ಪ್ರಕಟಗೊಂಡಿದ್ದು, ಪಿ.ವಿ.ನಾಗರಾಜುರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

‘ಕರ್ನಾಟಕ ರಾಜ್ಯವು ರೂಪುಗೊಳ್ಳುವಲ್ಲಿ, ರೂಪುಗೊಂಡ ಬಳಿಕ ತನ್ನ ಚಹರೆಯನ್ನು
ರೂಪಿಸಿಕೊಳ್ಳುವಲ್ಲಿ ಚಲನಚಿತ್ರೋದ್ಯಮವು ಹೇಗೆ ಉಪಕರಣವಾಗಿ ದುಡಿದಿದೆ’ ಎಂಬ ಚರಿತ್ರೆಯನ್ನು ಹಿಡಿದಿಡಲು ಯತ್ನಿಸಿರುವುದು ಈ ಮಹಾಪ್ರಬಂಧದಲ್ಲಿ ದಾಖಲಾಗಿದೆ ಎಂಬುದಾಗಿ ಲೇಖಕ ಡಾ.ರಹಮತ್ ತರೀಕೆರೆ ತಿಳಿಸಿದ್ದಾರೆ. ಕರ್ನಾಟಕದ ಅಸ್ಥಿತೆಯನ್ನು ಕೇಂದ್ರವಾಗಿಟ್ಟುಕೊಂಡು ಹಾಡುಗಳನ್ನು ವಿಶ್ಲೇಷಿಸಿದ್ದಾರೆ ಎಂಬುದಾಗಿಯೂ ಅವರು ಉಲ್ಲೇಖಿಸಿರುವುದು ಕುತೂಹಲದಾಯಕವಾದ ವಿಷಯ.

ಕನ್ನಡ ಚಿತ್ರರಂಗವನ್ನು ಬೆಳೆಸಿದ್ದು ಕನ್ನಡ ಚಳವಳಿಗಳು ಎಂದರೆ ತಪ್ಪಾಗಲಾರದು. ವರ್ಷಕ್ಕೆ 6-7 ಕನ್ನಡ ಚಿತ್ರಗಳು ನಿರ್ಮಾಣವಾಗುತ್ತಿದ್ದ ದಯನೀಯ ಸ್ಥಿತಿಯಲ್ಲಿ ಆರಂಭವಾದ ಈ ಕನ್ನಡ ಚಳವಳಿಯ ಉದ್ದಕ್ಕೂ ಕನ್ನಡ ಚಿತ್ರಗಳನ್ನು ನೋಡಬೇಕು, ಪರಭಾಷೆಯ ಚಿತ್ರಗಳ ಡಬ್ಬಿಂಗ್ ನಿಲ್ಲಬೇಕು, ಚಿತ್ರೋದ್ಯಮ ಕರ್ನಾಟಕದಲ್ಲಿ (ಆಗ ಮೈಸೂರು ರಾಜ್ಯ) ನೆಲೆ ನಿಲ್ಲಬೇಕು, ಸರ್ಕಾರ ಚಿತ್ರೋದ್ಯಮಕ್ಕೆ ನೆರವು ನೀಡಬೇಕು ಎಂಬ ಬೇಡಿಕೆಗಳನ್ನು ಕನ್ನಡ ಪರ ಚಳವಳಿಗಾರರಾದ ಕೋಣಂದೂರು ಲಿಂಗಪ್ಪ, ಅನಕೃ, ನಾಡಿಗೇರ ಕೃಷ್ಣರಾಯ, ಮ.ರಾಮಮೂರ್ತಿ, ಎಂ.ಎಸ್.ನಟರಾಜನ್, ಅನಂತರದ ದಿವಸಗಳಲ್ಲಿ ವಾಟಾಳ್ ನಾಗರಾಜ್ ಬಲವಾಗಿ ಪ್ರತಿಪಾದಿಸಿದರು. ಇದರಿಂದಾಗಿ ಕನ್ನಡ ಚಿತ್ರಗಳ ನಿರ್ಮಾಣ ಹೆಚ್ಚಾದವು. ಕಾದಂಬರಿಗಳ ಆಧಾರದ ಮೇಲೆ ಚಲನಚಿತ್ರಗಳು ತಯಾರಾದವು. ಸಬ್ಸಿಡಿ ಯೋಜನೆ ಬಂತು. ಅನೇಕ ಲೇಖಕರು ಚಿತ್ರಗಳತ್ತ ಗಮನಹರಿಸಿದರು.

ಕನ್ನಡ ಚಲನಚಿತ್ರಗಳನ್ನು ಈ ಚಳವಳಿಗಳ ಹಿನ್ನೆಲೆಯಲ್ಲಿ ಹಲವು ಸಲ ನೋಡಿದವರನ್ನೂ ನಾನು ಬಲ್ಲೆ. ಬೆಂಗಳೂರಿನ ಮೆಜೆಸ್ಟಿಕ್ ಪ್ರದೇಶದಲ್ಲಿ ಯಾವ ಚಿತ್ರ ಮಂದಿರವೂ ಕನ್ನಡ ಚಿತ್ರ ಪ್ರದರ್ಶಿಸುತ್ತಿರಲಿಲ್ಲ. ಅದಕ್ಕೆ ಹೋರಾಟ ಮಾಡಿ, ಜಿ.ವಿ.ಅಯ್ಯರ್ ಅವರ ‘ಬಂಗಾರಿ’ (ಕೃಷ್ಣಮೂರ್ತಿ ಪುರಾಣಿಕರ ದೇವರಕೂಸು) ಮೊತ್ತ ಮೊದಲ ಬಾರಿಗೆ ಅಲಂಕಾ‌ ಚಿತ್ರಮಂದಿರದಲ್ಲಿ ಬಿಡುಗಡೆಯಾಯಿತು.

ಈಗಿನ ಚೆನ್ನೈನಲ್ಲಿ ಚಿತ್ರೀಕರಣಕ್ಕೆ ಅನುಭವಿಸುತ್ತಿದ್ದ ಸಂಕಟ ನಿವಾರಣೆಗೆ ಬಾಲಕೃಷ್ಣ ‘ಅಭಿಮಾನ್’ ಸ್ಟುಡಿಯೋಗೆ ಪ್ರಯತ್ನ ಶುರುಮಾಡಿದರು. ಇದರಿಂದಾಗಿ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ ಆರು ಫೋರುಗಳಲ್ಲಿ ಚಿತ್ರೀಕರಣ ನಡೆಯುವಂತಾಯಿತು. ಭಾರತೀಯ ಚಲನಚಿತ್ರರಂಗ ಕನ್ನಡದತ್ತ ನೋಡುವಂತಾಯಿತು. ಆದರೆ ಕನ್ನಡ ಚಿತ್ರರಂಗಕ್ಕೆ ಆ ನೆನಪು ಮತ್ತು ಕೃತಜ್ಞತೆ ಇದೆಯೇ?

-ಕೆ.ವೆಂಕಟರಾಜು, ಚಾಮರಾಜನಗರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

48 seconds ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

46 mins ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

1 hour ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 hours ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

2 hours ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

2 hours ago