ಓದುಗರ ಪತ್ರ

ಓದುಗರ ಪತ್ರ | ಸಿದ್ದರಾಮಯ್ಯನವರ ಹೆಸರಿಡುವುದು ಸೂಕ್ತ

ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಲಕ್ಷಿ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಮೇಟಗಳ್ಳಿ ರಾಯಲ್ ಇನ್ ಜಂಕ್ಷನ್‌ವರೆಗಿನ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಬೇಕು ಎಂಬ ಚರ್ಚೆ ಆರಂಭವಾಗಿದೆ. ಈ ರಸ್ತೆಗೆ ಸಿದ್ದರಾಮಯ್ಯರವರ ಹೆಸರಿಡ ಬೇಕು ಎನ್ನುವ ಸಂಬಂಧ ಮಹಾನಗರ ಪಾಲಿಕೆ ಹೊರಡಿಸಿದ ಸಾರ್ವಜನಿಕ ಪ್ರಕಟಣೆಗೆ ಪರ-ವಿರೋಧ ವ್ಯಕ್ತವಾಗಿದ್ದು, ಸಿದ್ದರಾಮಯ್ಯ ರವರ ಹೆಸರಿಟ್ಟರೆ ತಪ್ಪೇನು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿರುವುದು ಆಶ್ಚರ್ಯ ತಂದಿದೆ.

ಹೌದು ಮೂಲತಃ ಮೈಸೂರಿನವರೇ ಆಗಿರುವ, ಸುದೀರ್ಘ ಕಾಲ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಮೈಸೂರಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿರುವ ಸಿದ್ದರಾಮಯ್ಯನವರ ಹೆಸರಿಡುವುದರಲ್ಲಿ ತಪ್ಪಿಲ್ಲ. ಅವರ ಸಾಧನೆಯನ್ನು ಗುರುತಿಸುವ ವಿಚಾರದಲ್ಲಿ ಪಕ್ಷಬೇಧ ಮಾಡಬಾರದು. ಸಿದ್ದರಾಮಯ್ಯನವರು ಸೈದ್ಧಾಂತಿಕವಾಗಿ ರಾಜಕೀಯದಲ್ಲಿ ವಿರೋಽಗಳನ್ನು ಹೊಂದಿದ್ದರೂ ರಾಜ್ಯಕ್ಕೆ ಅವರ ಕೊಡುಗೆ ಅಪಾರ. ಅಂತಹವರ ಹೆಸರನ್ನು ಮೈಸೂರಿನ ಒಂದು ರಸ್ತೆಗೆ ಇಡುವುದು ಸೂಕ್ತವೆನಿಸುತ್ತದೆ. ಸಾರ್ವಜನಿಕರು ಪಕ್ಷಬೇಧ ಮರೆತು ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಡಲು ಸಹಕರಿಸಬೇಕು.
-ಎಚ್. ವಿ. ಮನೋಜ್, ಹೊಸಮಾಳ, ಎಚ್. ಡಿ. ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…

11 mins ago

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

3 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

3 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

3 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

3 hours ago