ಓದುಗರ ಪತ್ರ

ಓದುಗರ ಪತ್ರ | ರಾಷ್ಟ್ರಪತಿಗಳಿಗೆ ಅಗೌರವ ತೋರಿಸಿದ್ದು ಸರಿಯಲ್ಲ

ಇತ್ತೀಚೆಗೆ ಪ್ರಾರಂಭಗೊಂಡ ಸಂಸತ್ತಿನ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ’Poor lady’ ಎಂದು ಕರೆದಿರುವ ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭೆಯ ಸದಸ್ಯೆ ಸೋನಿಯಾ ಗಾಂಧಿಯವರನ್ನು ಆಡಳಿತಾರೂಢ ಮೈತ್ರಿಕೂಟದ ಪಕ್ಷಗಳು ಕಟುವಾಗಿ ಟೀಕಿಸಿವೆ. ಅಲ್ಲದೆ ಅವರ ವಿರುದ್ಧ ರಾಜ್ಯಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಕೂಡ ಮಂಡಿಸಲಾಗಿದೆ.

ಸೋನಿಯಾ ಗಾಂಧಿಯವರು ಯಾವ ಅರ್ಥದಲ್ಲಿ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಆದರೂ ದೇಶದ ಸಾಂವಿಧಾನಿಕ ಮುಖ್ಯಸ್ಥರಾಗಿರುವ ರಾಷ್ಟ್ರಪತಿಗಳ ಬಗ್ಗೆ ಅವರು ಈ ರೀತಿ ಕೇವಲವಾಗಿ ಮಾತನಾಡಿರುವುದು ಸರಿಯಲ್ಲ. ಇದರಿಂದ ರಾಷ್ಟ್ರಪತಿಗಳ ಘನತೆ ಮತ್ತು ಗೌರವಕ್ಕೆ ಧಕ್ಕೆಯುಂಟಾಗಿದೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ನಿರಾಕರಿಸಲು ಸಾಧ್ಯವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಹಾಗೂ ಒಂದು ರಾಷ್ಟ್ರೀಯ ಪಕ್ಷದ ನಾಯಕರಾಗಿ ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಸೋನಿಯಾ ಗಾಂಧಿಯವರು ಈ ರೀತಿ ಮಾತನಾಡಿದ್ದು ಸರಿಯಲ್ಲ.
-ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago