ಓದುಗರ ಪತ್ರ

ಓದುಗರ ಪತ್ರ | ‘ಮಳೆ ಬಂದಾಗ ಸಿಗ್ನಲ್ ಲೈಟ್‌ಗಳು ನಿಷ್ಕ್ರಿಯವಾದರೆ ಒಳಿತು’

ಕಳೆದ ವಾರ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಅಗರ್‌ವಾಲ್ ಕಣ್ಣಿನ ಆಸ್ಪತ್ರೆಯ, ಸರ್ಕಲ್ ಬಳಿ ಇರುವ ಸಿಗ್ನಲ್ ಲೈಟ್‌ಗಳು, ರಾತ್ರಿ ೮ ಗಂಟೆಯ ಸುಮಾರಿಗೆ ಮಳೆ ಬಂದಾಗಲೂ ಕಾರ್ಯನಿರ್ವಹಿಸುತ್ತಿದ್ದವು! ಇದರಿಂದಾಗಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು, ಹಸಿರು ಸಿಗ್ನಲ್ ಬರುವ ತನಕ ಸುರಿಯುವ ಮಳೆಯಲ್ಲಿಯೇ ನಿಲ್ಲುವುದು ಅನಿವಾರ್ಯವಾಗಿತ್ತು. ಇದು ಮೈಸೂರಿನ ಎಲ್ಲಾ ಸಿಗ್ನಲ್ ಲೈಟ್‌ಗಳ ಸ್ಥಳದಲ್ಲಿ ವಾಹನ ಸವಾರರು ಅನುಭವಿಸುವ ಕಿರಿಕಿರಿಯಾಗಿದೆ. ತಂತ್ರಜ್ಞಾನ, ಇಷ್ಟು ಮುಂದುವರಿದಿದ್ದರೂ ಮಳೆ ಬಂದಾಗ, ಸಿಗ್ನಲ್ ಲೈಟ್‌ಗಳು, ಸ್ವಯಂ ಚಾಲಿತವಾಗಿ ಆಫ್ ಆಗುವ ವ್ಯವಸ್ಥೆ ಮೈಸೂರಿಗೆ ಇನ್ನೂ ಬಂದಿಲ್ಲವೇಕೆ? ಈ ರೀತಿ ಮಳೆ ಬಂದಾಗ ಹತ್ತಿರದಲ್ಲೇ ಇರುವ ಪೊಲೀಸ್ ಠಾಣೆಯ ಸಿಬ್ಬಂದಿ ಬಂದು ಈ ಸಿಗ್ನಲ್ ಲೈಟ್‌ಗಳನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸುವ ಗೋಜಿಗೂ ಹೋಗುವುದಿಲ್ಲ.

ಕೆಲವು ವರ್ಷಗಳ ಹಿಂದೆ, ಮೈಸೂರಿನಲ್ಲಿ ನಗರ ಪೊಲೀಸ್ ಆಯುಕ್ತರಾಗಿದ್ದ ಎಂ. ಎ. ಸಲೀಂ ಅವರ ಗಮನಕ್ಕೆ ತಂದಾಗ, ತಕ್ಷಣವೇ ಸ್ಪಂದಿಸಿ, ಸಿಗ್ನಲ್ ಲೈಟ್‌ಗಳು ಇರುವ ಸರ್ಕಲ್‌ನ ಸಮೀಪದ ಪೊಲೀಸ್ ಠಾಣೆಗಳಿಗೆ ಈ ಬಗ್ಗೆ ನಿರ್ದೇಶನ ನೀಡಿದ್ದರು. ಹಾಲಿ ಇರುವ ಪೊಲೀಸ್ ಆಯುಕ್ತರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು,

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago