ಕಳೆದ ವಾರ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಅಗರ್ವಾಲ್ ಕಣ್ಣಿನ ಆಸ್ಪತ್ರೆಯ, ಸರ್ಕಲ್ ಬಳಿ ಇರುವ ಸಿಗ್ನಲ್ ಲೈಟ್ಗಳು, ರಾತ್ರಿ ೮ ಗಂಟೆಯ ಸುಮಾರಿಗೆ ಮಳೆ ಬಂದಾಗಲೂ ಕಾರ್ಯನಿರ್ವಹಿಸುತ್ತಿದ್ದವು! ಇದರಿಂದಾಗಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು, ಹಸಿರು ಸಿಗ್ನಲ್ ಬರುವ ತನಕ ಸುರಿಯುವ ಮಳೆಯಲ್ಲಿಯೇ ನಿಲ್ಲುವುದು ಅನಿವಾರ್ಯವಾಗಿತ್ತು. ಇದು ಮೈಸೂರಿನ ಎಲ್ಲಾ ಸಿಗ್ನಲ್ ಲೈಟ್ಗಳ ಸ್ಥಳದಲ್ಲಿ ವಾಹನ ಸವಾರರು ಅನುಭವಿಸುವ ಕಿರಿಕಿರಿಯಾಗಿದೆ. ತಂತ್ರಜ್ಞಾನ, ಇಷ್ಟು ಮುಂದುವರಿದಿದ್ದರೂ ಮಳೆ ಬಂದಾಗ, ಸಿಗ್ನಲ್ ಲೈಟ್ಗಳು, ಸ್ವಯಂ ಚಾಲಿತವಾಗಿ ಆಫ್ ಆಗುವ ವ್ಯವಸ್ಥೆ ಮೈಸೂರಿಗೆ ಇನ್ನೂ ಬಂದಿಲ್ಲವೇಕೆ? ಈ ರೀತಿ ಮಳೆ ಬಂದಾಗ ಹತ್ತಿರದಲ್ಲೇ ಇರುವ ಪೊಲೀಸ್ ಠಾಣೆಯ ಸಿಬ್ಬಂದಿ ಬಂದು ಈ ಸಿಗ್ನಲ್ ಲೈಟ್ಗಳನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸುವ ಗೋಜಿಗೂ ಹೋಗುವುದಿಲ್ಲ.
ಕೆಲವು ವರ್ಷಗಳ ಹಿಂದೆ, ಮೈಸೂರಿನಲ್ಲಿ ನಗರ ಪೊಲೀಸ್ ಆಯುಕ್ತರಾಗಿದ್ದ ಎಂ. ಎ. ಸಲೀಂ ಅವರ ಗಮನಕ್ಕೆ ತಂದಾಗ, ತಕ್ಷಣವೇ ಸ್ಪಂದಿಸಿ, ಸಿಗ್ನಲ್ ಲೈಟ್ಗಳು ಇರುವ ಸರ್ಕಲ್ನ ಸಮೀಪದ ಪೊಲೀಸ್ ಠಾಣೆಗಳಿಗೆ ಈ ಬಗ್ಗೆ ನಿರ್ದೇಶನ ನೀಡಿದ್ದರು. ಹಾಲಿ ಇರುವ ಪೊಲೀಸ್ ಆಯುಕ್ತರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು,
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…
ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…
ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್ ಎಂಬಾತನೇ…
ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ…
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…