ಕಳೆದ ವಾರ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಅಗರ್ವಾಲ್ ಕಣ್ಣಿನ ಆಸ್ಪತ್ರೆಯ, ಸರ್ಕಲ್ ಬಳಿ ಇರುವ ಸಿಗ್ನಲ್ ಲೈಟ್ಗಳು, ರಾತ್ರಿ ೮ ಗಂಟೆಯ ಸುಮಾರಿಗೆ ಮಳೆ ಬಂದಾಗಲೂ ಕಾರ್ಯನಿರ್ವಹಿಸುತ್ತಿದ್ದವು! ಇದರಿಂದಾಗಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು, ಹಸಿರು ಸಿಗ್ನಲ್ ಬರುವ ತನಕ ಸುರಿಯುವ ಮಳೆಯಲ್ಲಿಯೇ ನಿಲ್ಲುವುದು ಅನಿವಾರ್ಯವಾಗಿತ್ತು. ಇದು ಮೈಸೂರಿನ ಎಲ್ಲಾ ಸಿಗ್ನಲ್ ಲೈಟ್ಗಳ ಸ್ಥಳದಲ್ಲಿ ವಾಹನ ಸವಾರರು ಅನುಭವಿಸುವ ಕಿರಿಕಿರಿಯಾಗಿದೆ. ತಂತ್ರಜ್ಞಾನ, ಇಷ್ಟು ಮುಂದುವರಿದಿದ್ದರೂ ಮಳೆ ಬಂದಾಗ, ಸಿಗ್ನಲ್ ಲೈಟ್ಗಳು, ಸ್ವಯಂ ಚಾಲಿತವಾಗಿ ಆಫ್ ಆಗುವ ವ್ಯವಸ್ಥೆ ಮೈಸೂರಿಗೆ ಇನ್ನೂ ಬಂದಿಲ್ಲವೇಕೆ? ಈ ರೀತಿ ಮಳೆ ಬಂದಾಗ ಹತ್ತಿರದಲ್ಲೇ ಇರುವ ಪೊಲೀಸ್ ಠಾಣೆಯ ಸಿಬ್ಬಂದಿ ಬಂದು ಈ ಸಿಗ್ನಲ್ ಲೈಟ್ಗಳನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸುವ ಗೋಜಿಗೂ ಹೋಗುವುದಿಲ್ಲ.
ಕೆಲವು ವರ್ಷಗಳ ಹಿಂದೆ, ಮೈಸೂರಿನಲ್ಲಿ ನಗರ ಪೊಲೀಸ್ ಆಯುಕ್ತರಾಗಿದ್ದ ಎಂ. ಎ. ಸಲೀಂ ಅವರ ಗಮನಕ್ಕೆ ತಂದಾಗ, ತಕ್ಷಣವೇ ಸ್ಪಂದಿಸಿ, ಸಿಗ್ನಲ್ ಲೈಟ್ಗಳು ಇರುವ ಸರ್ಕಲ್ನ ಸಮೀಪದ ಪೊಲೀಸ್ ಠಾಣೆಗಳಿಗೆ ಈ ಬಗ್ಗೆ ನಿರ್ದೇಶನ ನೀಡಿದ್ದರು. ಹಾಲಿ ಇರುವ ಪೊಲೀಸ್ ಆಯುಕ್ತರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು,
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…