ಕಳೆದ ವಾರ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಅಗರ್ವಾಲ್ ಕಣ್ಣಿನ ಆಸ್ಪತ್ರೆಯ, ಸರ್ಕಲ್ ಬಳಿ ಇರುವ ಸಿಗ್ನಲ್ ಲೈಟ್ಗಳು, ರಾತ್ರಿ ೮ ಗಂಟೆಯ ಸುಮಾರಿಗೆ ಮಳೆ ಬಂದಾಗಲೂ ಕಾರ್ಯನಿರ್ವಹಿಸುತ್ತಿದ್ದವು! ಇದರಿಂದಾಗಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು, ಹಸಿರು ಸಿಗ್ನಲ್ ಬರುವ ತನಕ ಸುರಿಯುವ ಮಳೆಯಲ್ಲಿಯೇ ನಿಲ್ಲುವುದು ಅನಿವಾರ್ಯವಾಗಿತ್ತು. ಇದು ಮೈಸೂರಿನ ಎಲ್ಲಾ ಸಿಗ್ನಲ್ ಲೈಟ್ಗಳ ಸ್ಥಳದಲ್ಲಿ ವಾಹನ ಸವಾರರು ಅನುಭವಿಸುವ ಕಿರಿಕಿರಿಯಾಗಿದೆ. ತಂತ್ರಜ್ಞಾನ, ಇಷ್ಟು ಮುಂದುವರಿದಿದ್ದರೂ ಮಳೆ ಬಂದಾಗ, ಸಿಗ್ನಲ್ ಲೈಟ್ಗಳು, ಸ್ವಯಂ ಚಾಲಿತವಾಗಿ ಆಫ್ ಆಗುವ ವ್ಯವಸ್ಥೆ ಮೈಸೂರಿಗೆ ಇನ್ನೂ ಬಂದಿಲ್ಲವೇಕೆ? ಈ ರೀತಿ ಮಳೆ ಬಂದಾಗ ಹತ್ತಿರದಲ್ಲೇ ಇರುವ ಪೊಲೀಸ್ ಠಾಣೆಯ ಸಿಬ್ಬಂದಿ ಬಂದು ಈ ಸಿಗ್ನಲ್ ಲೈಟ್ಗಳನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸುವ ಗೋಜಿಗೂ ಹೋಗುವುದಿಲ್ಲ.
ಕೆಲವು ವರ್ಷಗಳ ಹಿಂದೆ, ಮೈಸೂರಿನಲ್ಲಿ ನಗರ ಪೊಲೀಸ್ ಆಯುಕ್ತರಾಗಿದ್ದ ಎಂ. ಎ. ಸಲೀಂ ಅವರ ಗಮನಕ್ಕೆ ತಂದಾಗ, ತಕ್ಷಣವೇ ಸ್ಪಂದಿಸಿ, ಸಿಗ್ನಲ್ ಲೈಟ್ಗಳು ಇರುವ ಸರ್ಕಲ್ನ ಸಮೀಪದ ಪೊಲೀಸ್ ಠಾಣೆಗಳಿಗೆ ಈ ಬಗ್ಗೆ ನಿರ್ದೇಶನ ನೀಡಿದ್ದರು. ಹಾಲಿ ಇರುವ ಪೊಲೀಸ್ ಆಯುಕ್ತರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು,
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…