ಓದುಗರ ಪತ್ರ
ಯಾವುದೇ ಕ್ರೀಡೆಯಾದರೂ ಅಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದಾಗ ಬೀಗಬಾರದು ಸೋತಾಗ ಕುಗ್ಗಬಾರದು. ಅದೇ ಕ್ರೀಡಾಸ್ಫೂರ್ತಿ. ಆದರೆ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡದ ಸೋಲು ನಿಜಕ್ಕೂ ಒಪ್ಪಿಕೊಳ್ಳುವ ಸೋಲಲ್ಲ.
ಸೋಲು ಗೌರವಾನ್ವಿತವಾಗಿರಬೇಕೇ ವಿನಾ ಶರಣಾಗತಿಯಂತಿರಬಾರದು. ಆದರೆ ಶ್ರೀಲಂಕಾದ ಆತಿಥ್ಯದಲ್ಲಿ ನಡೆದಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ 3 ಪಂದ್ಯಗಳ ಪೈಕಿ ಎರಡನ್ನು ಹೀನಾಯವಾಗಿ ಸೋತಿದಲ್ಲದೇ ಒಂದು ಪಂದ್ಯವನ್ನು ಮಾಡಿಕೊಂಡಿದೆ. ಭಾರತೀಯ ತಂಡದಲ್ಲಿ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಶುಭನ್ ಗಿಲ್, ಶ್ರೇಯಸ್ ಅಯ್ಯರಂತಹ ಅನುಭವಿ ಆಟಗಾರರಿದ್ದರೂ ಭಾರತ 230-240 ರನ್ಗಳ ಮೊತ್ತವನ್ನೂ ಬೆನ್ನಟ್ಟಲು ಸಾಧ್ಯವಾಗಿಲ್ಲ ಎಂದರೆ ಇದನ್ನು ಸೋಲು ಎನ್ನುವುದಕ್ಕಿಂತಲೂ ಶರಣಾಗತಿ ಎಂದೇ ಹೇಳಬೇಕು. ಎನ್ನಬಹುದು. ಅಲ್ಲದೆ ನಡೆದ ಮೂರು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ 231 ರನ್ಗಳನ್ನು ಗಳಿಸಲಾಗದೆ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಜತೆಗೆ ಆಲ್ಔಟ್ ಆಗಿತ್ತು. ಉಳಿದ ಎರಡು ಪಂದ್ಯಗಳಲ್ಲಿಯೂ ಆಲೌಟ್ ಆಗಿರುವುದಲ್ಲದೆ 32 ಮತ್ತು 110 ರನ್ಗಳ ಭಾರಿ ಅಂತರದ ಸೋಲು ಅನುಭವಿಸಿದೆ. ಭಾರತೀಯ ಕ್ರಿಕೆಟ್ ತಂಡದ ಈ ಪ್ರದರ್ಶನ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತಂದಿದ್ದು, ಗೌತಮ್ ಗಂಭೀರ್ ತರಬೇತುದಾರರಾಗಿ ಆಯ್ಕೆಯಾದ ಮೊದಲ ಸರಣಿಯಲ್ಲಿಯೇ ಈ ರೀತಿಯ ಸೋಲು ನಿಜಕ್ಕೂ ಬೇಸರ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು,
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…