ಓದುಗರ ಪತ್ರ
ಯಾವುದೇ ಕ್ರೀಡೆಯಾದರೂ ಅಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದಾಗ ಬೀಗಬಾರದು ಸೋತಾಗ ಕುಗ್ಗಬಾರದು. ಅದೇ ಕ್ರೀಡಾಸ್ಫೂರ್ತಿ. ಆದರೆ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡದ ಸೋಲು ನಿಜಕ್ಕೂ ಒಪ್ಪಿಕೊಳ್ಳುವ ಸೋಲಲ್ಲ.
ಸೋಲು ಗೌರವಾನ್ವಿತವಾಗಿರಬೇಕೇ ವಿನಾ ಶರಣಾಗತಿಯಂತಿರಬಾರದು. ಆದರೆ ಶ್ರೀಲಂಕಾದ ಆತಿಥ್ಯದಲ್ಲಿ ನಡೆದಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ 3 ಪಂದ್ಯಗಳ ಪೈಕಿ ಎರಡನ್ನು ಹೀನಾಯವಾಗಿ ಸೋತಿದಲ್ಲದೇ ಒಂದು ಪಂದ್ಯವನ್ನು ಮಾಡಿಕೊಂಡಿದೆ. ಭಾರತೀಯ ತಂಡದಲ್ಲಿ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಶುಭನ್ ಗಿಲ್, ಶ್ರೇಯಸ್ ಅಯ್ಯರಂತಹ ಅನುಭವಿ ಆಟಗಾರರಿದ್ದರೂ ಭಾರತ 230-240 ರನ್ಗಳ ಮೊತ್ತವನ್ನೂ ಬೆನ್ನಟ್ಟಲು ಸಾಧ್ಯವಾಗಿಲ್ಲ ಎಂದರೆ ಇದನ್ನು ಸೋಲು ಎನ್ನುವುದಕ್ಕಿಂತಲೂ ಶರಣಾಗತಿ ಎಂದೇ ಹೇಳಬೇಕು. ಎನ್ನಬಹುದು. ಅಲ್ಲದೆ ನಡೆದ ಮೂರು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ 231 ರನ್ಗಳನ್ನು ಗಳಿಸಲಾಗದೆ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಜತೆಗೆ ಆಲ್ಔಟ್ ಆಗಿತ್ತು. ಉಳಿದ ಎರಡು ಪಂದ್ಯಗಳಲ್ಲಿಯೂ ಆಲೌಟ್ ಆಗಿರುವುದಲ್ಲದೆ 32 ಮತ್ತು 110 ರನ್ಗಳ ಭಾರಿ ಅಂತರದ ಸೋಲು ಅನುಭವಿಸಿದೆ. ಭಾರತೀಯ ಕ್ರಿಕೆಟ್ ತಂಡದ ಈ ಪ್ರದರ್ಶನ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತಂದಿದ್ದು, ಗೌತಮ್ ಗಂಭೀರ್ ತರಬೇತುದಾರರಾಗಿ ಆಯ್ಕೆಯಾದ ಮೊದಲ ಸರಣಿಯಲ್ಲಿಯೇ ಈ ರೀತಿಯ ಸೋಲು ನಿಜಕ್ಕೂ ಬೇಸರ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು,
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…
ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ನನ್ನು ದೋಷಿ…
ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…