ಓದುಗರ ಪತ್ರ

ಓದುಗರ ಪತ್ರ | ಇದು ಸೋಲಲ್ಲ, ಶರಣಾಗತಿ

ಯಾವುದೇ ಕ್ರೀಡೆಯಾದರೂ ಅಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದಾಗ ಬೀಗಬಾರದು ಸೋತಾಗ ಕುಗ್ಗಬಾರದು. ಅದೇ ಕ್ರೀಡಾಸ್ಫೂರ್ತಿ. ಆದರೆ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡದ ಸೋಲು ನಿಜಕ್ಕೂ ಒಪ್ಪಿಕೊಳ್ಳುವ ಸೋಲಲ್ಲ.

ಸೋಲು ಗೌರವಾನ್ವಿತವಾಗಿರಬೇಕೇ ವಿನಾ ಶರಣಾಗತಿಯಂತಿರಬಾರದು. ಆದರೆ ಶ್ರೀಲಂಕಾದ ಆತಿಥ್ಯದಲ್ಲಿ ನಡೆದಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ 3 ಪಂದ್ಯಗಳ ಪೈಕಿ ಎರಡನ್ನು ಹೀನಾಯವಾಗಿ ಸೋತಿದಲ್ಲದೇ ಒಂದು ಪಂದ್ಯವನ್ನು ಮಾಡಿಕೊಂಡಿದೆ. ಭಾರತೀಯ ತಂಡದಲ್ಲಿ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಶುಭನ್ ಗಿಲ್, ಶ್ರೇಯಸ್ ಅಯ್ಯ‌ರಂತಹ ಅನುಭವಿ ಆಟಗಾರರಿದ್ದರೂ ಭಾರತ 230-240 ರನ್‌ಗಳ ಮೊತ್ತವನ್ನೂ ಬೆನ್ನಟ್ಟಲು ಸಾಧ್ಯವಾಗಿಲ್ಲ ಎಂದರೆ ಇದನ್ನು ಸೋಲು ಎನ್ನುವುದಕ್ಕಿಂತಲೂ ಶರಣಾಗತಿ ಎಂದೇ ಹೇಳಬೇಕು. ಎನ್ನಬಹುದು. ಅಲ್ಲದೆ ನಡೆದ ಮೂರು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ 231 ರನ್‌ಗಳನ್ನು ಗಳಿಸಲಾಗದೆ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಜತೆಗೆ ಆಲ್‌ಔಟ್‌ ಆಗಿತ್ತು. ಉಳಿದ ಎರಡು ಪಂದ್ಯಗಳಲ್ಲಿಯೂ ಆಲೌಟ್ ಆಗಿರುವುದಲ್ಲದೆ 32 ಮತ್ತು 110 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿದೆ. ಭಾರತೀಯ ಕ್ರಿಕೆಟ್ ತಂಡದ ಈ ಪ್ರದರ್ಶನ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತಂದಿದ್ದು, ಗೌತಮ್ ಗಂಭೀರ್ ತರಬೇತುದಾರರಾಗಿ ಆಯ್ಕೆಯಾದ ಮೊದಲ ಸರಣಿಯಲ್ಲಿಯೇ ಈ ರೀತಿಯ ಸೋಲು ನಿಜಕ್ಕೂ ಬೇಸರ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು,

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago