ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು ಎಕರೆ ಪ್ರದೇಶದ ಜಾಗವು ಹಲವಾರು ವರ್ಷಗಳಿಂದ ಗಿಡ ಗಂಟಿಗಳು ಬೆಳೆದು ಕಾಡಿನಂತಾಗಿತ್ತು, ಈಗ ಸಾರ್ವಜನಿಕರ ಒತ್ತಾಯದ ಮೇರೆಗೆ ಈ ಜಾಗವನ್ನು ನಗರ ಪಾಲಿಕೆಯವರು ಸಚ ಮಾಡಿದ್ದಾರೆ. ಈ ಜಾಗದಲ್ಲಿ ಮೈಸೂರು ಮಹಾನಗರ ಪಾಲಿಕೆಯವರು ಆಧುನಿಕ ವಿದ್ಯುತ್ ಚಿತಾಗಾರವನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು





