ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75ರಷ್ಟು ಮೀಸಲಾತಿ ನೀಡಬೇಕು ಎಂಬ ವಿಧೇಯಕ ವನ್ನು ಜು.15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದುಕೊಂಡರೂ ಈ ಬಗ್ಗೆ ಗೊಂದಲಗಳು ಹಾಗೂ ಕೆಲ ಉದ್ಯಮಿಗಳಿಂದ ವಿರೋಧ ವ್ಯಕ್ತವಾದ ಬಳಿಕ ಈ ವಿಧೇಯಕವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದಾಗಿ
ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಇಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಉದ್ಯೋಗದಲ್ಲಿಯೂ ಕೂಡ. ಈ ಬೇಡಿಕೆ ಬಹಳ ಹಿಂದಿನಿಂದಲೂ ಕೇಳಿಬಂದಿತ್ತಾದರೂ, ಈಗ ಈ ಸಂಬಂಧ ಕಾಯಿದೆ ಜಾರಿಯಾಗುವ ಲಕ್ಷಣಗಳು ಕಾಣುತ್ತಿವೆ. ಸದ್ಯ ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಈ ಹೊಸ ಕಾಯಿದೆಯು ಕನ್ನಡಿಗರಿಗೆ ಉದ್ಯೋಗಗಳನ್ನು ಸೃಷ್ಟಿಸಲು ಸಹಕಾರಿಯಾಗಲಿದೆ. ಕರ್ನಾಟಕದಲ್ಲಿ 10-15 ವರ್ಷಗಳಿಂದ ವಾಸಿಸುತ್ತಿದ್ದರೂ ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಸರಿಯಾಗಿ ಬಾರದವರನ್ನೂ ಕೆಲ ಖಾಸಗಿ ಏಜೆನ್ಸಿಗಳು ನಡೆಸುವ ಕನ್ನಡ ಪರೀಕ್ಷೆಯಲ್ಲಿ ಪಾಸಾದ ಮಾತ್ರಕ್ಕೆ ಅವರನ್ನು ಸ್ಥಳೀಯರು ಎಂದು ಪರಿಗಣಿಸುವುದು ಸೂಕ್ತವಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಈ ವಿಧೇಯಕವನ್ನು ಕಾಯಿದೆಯಾಗಿ ಜಾರಿಗೆ ತರುವುದು ಸೂಕ್ತ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…