ಓದುಗರ ಪತ್ರ

ಓದುಗರ ಪತ್ರ | ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯ ಕಾರ್ಮೋಡ!

೨೦೨೩ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ೧೩೬ ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದಾಗ ಈ ಅವಧಿಯಲ್ಲಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇರುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ದಾಗ ಆ ಭಾವನೆ ಸುಳ್ಳಾಗಿದೆಯೇನೋ ಅನಿಸುತ್ತದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ ಎಂಬುದಕ್ಕೆ ರಾಜಕಾರಣಿಗಳು ಆಗಾಗ್ಗೆ ಏರ್ಪಡಿಸುತ್ತಿರುವ ಡಿನ್ನರ್ ಕೂಟಗಳು, ಸಮಾನ ಮನಸ್ಕರ ಸಭೆಗಳು, ಗುಂಪಿನಲ್ಲಿ ವಿದೇಶಿ ಪ್ರವಾಸ, ರಹಸ್ಯ ಮೀಟಿಂಗ್‌ಗಳು ನಡೆ ಯುತ್ತಿರುವುದು ಸಾಕ್ಷಿಯಾಗಿದೆ.

 

ಇನ್ನೇನು ಕೆಲವೇ ದಿನಗಳಲ್ಲಿ ಕುದುರೆ ವ್ಯಾಪಾರವೂ ಆರಂಭವಾಗಲಿದ್ದು, ರೆಸಾರ್ಟ್ ರಾಜಕಾರಣ ಗರಿಗೆದರ ಬಹುದು ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದೆ. ಈ ರಾಜಕೀಯ ಅಸ್ಥಿರತೆಯ ಕಾರ್ಮೋಡ ರಾಜ್ಯದ ಎರಡೂ ಪ್ರಮುಖ ಪಕ್ಷಗಳಿಗೆ ಅಂಟಿದ್ದು, ಒಂದು ಪಕ್ಷದ ಭಿನ್ನಮತವನ್ನು ಮತ್ತೊಂದು ಪಕ್ಷ ನಗದೀಕರಿಸಿಕೊಳ್ಳುವ ಸ್ಥಿತಿಯಲ್ಲಿರುವುದರಿಂದ ಭಿನ್ನಮತ ತಾರ್ಕಿಕ ಅಂತ್ಯ ಕಾಣಲು ವಿಳಂಬವಾಗಬಹುದು. ಚಲನಚಿತ್ರಗಳ ಕೊನೆಯ ದೃಶ್ಯಾವಳಿಗಳಲ್ಲಿ ಪೊಲೀಸರು ಪ್ರವೇಶಿಸಿದಂತೆ ಈ ಪಕ್ಷಗಳ ವರಿಷ್ಠರು ತಡವಾಗಿ ಪ್ರವೇಶ ಮಾಡುತ್ತಿದ್ದು, ರಾಜ್ಯ ರಾಜಕಾರಣದ ಪರಿಸ್ಥಿತಿ ‘ಕೋಟೆ ಸೂರೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಆಗಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳ ಕಾರ್ಯ ವೈಖರಿ ಕನ್ನಡಿಗರನ್ನು ಭ್ರಮನಿರಸನಗೊಳ್ಳುವಂತೆ ಮಾಡಿದ್ದು, ನಮ್ಮ ರಾಜ್ಯದಲ್ಲೂ ಪ್ರಾದೇಶಿಕ ಪಕ್ಷವೊಂದು ಅಽಕಾರದಲ್ಲಿ ಇರಬಾರದಿತ್ತೇ ಎಂದು ಚಿಂತಿಸುವಂತೆ ಮಾಡಿದೆ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ…

9 mins ago

ಬಂಧನ್‌ ಬ್ಯಾಂಕ್‌ನಲ್ಲಿ ಕನ್ನಡಿಗರ ವಜಾ : ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…

23 mins ago

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

1 hour ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

1 hour ago

ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಡಾ.ಹೆಚ್.ಸಿ.ಮಹದೇವಪ್ಪ

ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…

2 hours ago

ಬಹುರೂಪಿ ಬಾಬಾ ಸಾಹೇಬ್‌ | ಜ.11 ರಿಂದ 18ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌…

3 hours ago