ಓದುಗರ ಪತ್ರ

ಓದುಗರ ಪತ್ರ | ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯ ಕಾರ್ಮೋಡ!

೨೦೨೩ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ೧೩೬ ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದಾಗ ಈ ಅವಧಿಯಲ್ಲಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇರುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ದಾಗ ಆ ಭಾವನೆ ಸುಳ್ಳಾಗಿದೆಯೇನೋ ಅನಿಸುತ್ತದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ ಎಂಬುದಕ್ಕೆ ರಾಜಕಾರಣಿಗಳು ಆಗಾಗ್ಗೆ ಏರ್ಪಡಿಸುತ್ತಿರುವ ಡಿನ್ನರ್ ಕೂಟಗಳು, ಸಮಾನ ಮನಸ್ಕರ ಸಭೆಗಳು, ಗುಂಪಿನಲ್ಲಿ ವಿದೇಶಿ ಪ್ರವಾಸ, ರಹಸ್ಯ ಮೀಟಿಂಗ್‌ಗಳು ನಡೆ ಯುತ್ತಿರುವುದು ಸಾಕ್ಷಿಯಾಗಿದೆ.

 

ಇನ್ನೇನು ಕೆಲವೇ ದಿನಗಳಲ್ಲಿ ಕುದುರೆ ವ್ಯಾಪಾರವೂ ಆರಂಭವಾಗಲಿದ್ದು, ರೆಸಾರ್ಟ್ ರಾಜಕಾರಣ ಗರಿಗೆದರ ಬಹುದು ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದೆ. ಈ ರಾಜಕೀಯ ಅಸ್ಥಿರತೆಯ ಕಾರ್ಮೋಡ ರಾಜ್ಯದ ಎರಡೂ ಪ್ರಮುಖ ಪಕ್ಷಗಳಿಗೆ ಅಂಟಿದ್ದು, ಒಂದು ಪಕ್ಷದ ಭಿನ್ನಮತವನ್ನು ಮತ್ತೊಂದು ಪಕ್ಷ ನಗದೀಕರಿಸಿಕೊಳ್ಳುವ ಸ್ಥಿತಿಯಲ್ಲಿರುವುದರಿಂದ ಭಿನ್ನಮತ ತಾರ್ಕಿಕ ಅಂತ್ಯ ಕಾಣಲು ವಿಳಂಬವಾಗಬಹುದು. ಚಲನಚಿತ್ರಗಳ ಕೊನೆಯ ದೃಶ್ಯಾವಳಿಗಳಲ್ಲಿ ಪೊಲೀಸರು ಪ್ರವೇಶಿಸಿದಂತೆ ಈ ಪಕ್ಷಗಳ ವರಿಷ್ಠರು ತಡವಾಗಿ ಪ್ರವೇಶ ಮಾಡುತ್ತಿದ್ದು, ರಾಜ್ಯ ರಾಜಕಾರಣದ ಪರಿಸ್ಥಿತಿ ‘ಕೋಟೆ ಸೂರೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಆಗಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳ ಕಾರ್ಯ ವೈಖರಿ ಕನ್ನಡಿಗರನ್ನು ಭ್ರಮನಿರಸನಗೊಳ್ಳುವಂತೆ ಮಾಡಿದ್ದು, ನಮ್ಮ ರಾಜ್ಯದಲ್ಲೂ ಪ್ರಾದೇಶಿಕ ಪಕ್ಷವೊಂದು ಅಽಕಾರದಲ್ಲಿ ಇರಬಾರದಿತ್ತೇ ಎಂದು ಚಿಂತಿಸುವಂತೆ ಮಾಡಿದೆ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೆಎಸ್‌ಆರ್‌ಟಿಸಿಯಿಂದ ಪ್ಯಾಕೇಜ್ ಟೂರ್ ಆರಂಭ

ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್…

34 mins ago

ಟಿ-20 ವಿಶ್ವಕಪ್ | ಇಂದು ಭಾರತ-ಪಾಕ್‌ ಹಣಾಹಣಿ

ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.15 ಭಾನುವಾರ

2 hours ago

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

13 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

13 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

14 hours ago