ಓದುಗರ ಪತ್ರ

ಓದುಗರ ಪತ್ರ | ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯ ಕಾರ್ಮೋಡ!

೨೦೨೩ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ೧೩೬ ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದಾಗ ಈ ಅವಧಿಯಲ್ಲಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇರುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ದಾಗ ಆ ಭಾವನೆ ಸುಳ್ಳಾಗಿದೆಯೇನೋ ಅನಿಸುತ್ತದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ ಎಂಬುದಕ್ಕೆ ರಾಜಕಾರಣಿಗಳು ಆಗಾಗ್ಗೆ ಏರ್ಪಡಿಸುತ್ತಿರುವ ಡಿನ್ನರ್ ಕೂಟಗಳು, ಸಮಾನ ಮನಸ್ಕರ ಸಭೆಗಳು, ಗುಂಪಿನಲ್ಲಿ ವಿದೇಶಿ ಪ್ರವಾಸ, ರಹಸ್ಯ ಮೀಟಿಂಗ್‌ಗಳು ನಡೆ ಯುತ್ತಿರುವುದು ಸಾಕ್ಷಿಯಾಗಿದೆ.

 

ಇನ್ನೇನು ಕೆಲವೇ ದಿನಗಳಲ್ಲಿ ಕುದುರೆ ವ್ಯಾಪಾರವೂ ಆರಂಭವಾಗಲಿದ್ದು, ರೆಸಾರ್ಟ್ ರಾಜಕಾರಣ ಗರಿಗೆದರ ಬಹುದು ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದೆ. ಈ ರಾಜಕೀಯ ಅಸ್ಥಿರತೆಯ ಕಾರ್ಮೋಡ ರಾಜ್ಯದ ಎರಡೂ ಪ್ರಮುಖ ಪಕ್ಷಗಳಿಗೆ ಅಂಟಿದ್ದು, ಒಂದು ಪಕ್ಷದ ಭಿನ್ನಮತವನ್ನು ಮತ್ತೊಂದು ಪಕ್ಷ ನಗದೀಕರಿಸಿಕೊಳ್ಳುವ ಸ್ಥಿತಿಯಲ್ಲಿರುವುದರಿಂದ ಭಿನ್ನಮತ ತಾರ್ಕಿಕ ಅಂತ್ಯ ಕಾಣಲು ವಿಳಂಬವಾಗಬಹುದು. ಚಲನಚಿತ್ರಗಳ ಕೊನೆಯ ದೃಶ್ಯಾವಳಿಗಳಲ್ಲಿ ಪೊಲೀಸರು ಪ್ರವೇಶಿಸಿದಂತೆ ಈ ಪಕ್ಷಗಳ ವರಿಷ್ಠರು ತಡವಾಗಿ ಪ್ರವೇಶ ಮಾಡುತ್ತಿದ್ದು, ರಾಜ್ಯ ರಾಜಕಾರಣದ ಪರಿಸ್ಥಿತಿ ‘ಕೋಟೆ ಸೂರೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಆಗಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳ ಕಾರ್ಯ ವೈಖರಿ ಕನ್ನಡಿಗರನ್ನು ಭ್ರಮನಿರಸನಗೊಳ್ಳುವಂತೆ ಮಾಡಿದ್ದು, ನಮ್ಮ ರಾಜ್ಯದಲ್ಲೂ ಪ್ರಾದೇಶಿಕ ಪಕ್ಷವೊಂದು ಅಽಕಾರದಲ್ಲಿ ಇರಬಾರದಿತ್ತೇ ಎಂದು ಚಿಂತಿಸುವಂತೆ ಮಾಡಿದೆ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

 

AddThis Website Tools
ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…

20 mins ago

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

46 mins ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

1 hour ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

2 hours ago

ನಿಯಮ ಪಾಲಿಸಿದರೆ ಗಣಿಗಾರಿಕೆಗೆ ಅನುಮತಿ: ಈಶ್ವರ್‌ ಖಂಡ್ರೆ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…

3 hours ago

ಅಪ್ಪು ಸಿನಿಮಾ ರೀ-ರಿಲೀಸ್‌: ನೆನೆದು ಭಾವುಕರಾದ ರಾಘಣ್ಣ

ಪುನೀತ್‌ ರಾಜಕುಮಾರ್‌ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್‌ಸ್ಟಾರ್‌ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್‌…

3 hours ago