ಓದುಗರ ಪತ್ರ

ಓದುಗರ ಪತ್ರ | ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯ ಕಾರ್ಮೋಡ!

೨೦೨೩ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ೧೩೬ ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದಾಗ ಈ ಅವಧಿಯಲ್ಲಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇರುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ದಾಗ ಆ ಭಾವನೆ ಸುಳ್ಳಾಗಿದೆಯೇನೋ ಅನಿಸುತ್ತದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ ಎಂಬುದಕ್ಕೆ ರಾಜಕಾರಣಿಗಳು ಆಗಾಗ್ಗೆ ಏರ್ಪಡಿಸುತ್ತಿರುವ ಡಿನ್ನರ್ ಕೂಟಗಳು, ಸಮಾನ ಮನಸ್ಕರ ಸಭೆಗಳು, ಗುಂಪಿನಲ್ಲಿ ವಿದೇಶಿ ಪ್ರವಾಸ, ರಹಸ್ಯ ಮೀಟಿಂಗ್‌ಗಳು ನಡೆ ಯುತ್ತಿರುವುದು ಸಾಕ್ಷಿಯಾಗಿದೆ.

 

ಇನ್ನೇನು ಕೆಲವೇ ದಿನಗಳಲ್ಲಿ ಕುದುರೆ ವ್ಯಾಪಾರವೂ ಆರಂಭವಾಗಲಿದ್ದು, ರೆಸಾರ್ಟ್ ರಾಜಕಾರಣ ಗರಿಗೆದರ ಬಹುದು ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದೆ. ಈ ರಾಜಕೀಯ ಅಸ್ಥಿರತೆಯ ಕಾರ್ಮೋಡ ರಾಜ್ಯದ ಎರಡೂ ಪ್ರಮುಖ ಪಕ್ಷಗಳಿಗೆ ಅಂಟಿದ್ದು, ಒಂದು ಪಕ್ಷದ ಭಿನ್ನಮತವನ್ನು ಮತ್ತೊಂದು ಪಕ್ಷ ನಗದೀಕರಿಸಿಕೊಳ್ಳುವ ಸ್ಥಿತಿಯಲ್ಲಿರುವುದರಿಂದ ಭಿನ್ನಮತ ತಾರ್ಕಿಕ ಅಂತ್ಯ ಕಾಣಲು ವಿಳಂಬವಾಗಬಹುದು. ಚಲನಚಿತ್ರಗಳ ಕೊನೆಯ ದೃಶ್ಯಾವಳಿಗಳಲ್ಲಿ ಪೊಲೀಸರು ಪ್ರವೇಶಿಸಿದಂತೆ ಈ ಪಕ್ಷಗಳ ವರಿಷ್ಠರು ತಡವಾಗಿ ಪ್ರವೇಶ ಮಾಡುತ್ತಿದ್ದು, ರಾಜ್ಯ ರಾಜಕಾರಣದ ಪರಿಸ್ಥಿತಿ ‘ಕೋಟೆ ಸೂರೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಆಗಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳ ಕಾರ್ಯ ವೈಖರಿ ಕನ್ನಡಿಗರನ್ನು ಭ್ರಮನಿರಸನಗೊಳ್ಳುವಂತೆ ಮಾಡಿದ್ದು, ನಮ್ಮ ರಾಜ್ಯದಲ್ಲೂ ಪ್ರಾದೇಶಿಕ ಪಕ್ಷವೊಂದು ಅಽಕಾರದಲ್ಲಿ ಇರಬಾರದಿತ್ತೇ ಎಂದು ಚಿಂತಿಸುವಂತೆ ಮಾಡಿದೆ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

14 mins ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

58 mins ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

1 hour ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

2 hours ago

ಇರುವೆ ಕಚ್ಚಿ ಶಿಶು ಸಾವು ಪ್ರಕರಣ ; ವೈದ್ಯರು ಸೇರಿ 7 ಮಂದಿಗೆ ಶೋಕಾಸ್‌ ನೋಟಿಸ್

ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು…

3 hours ago