ಓದುಗರ ಪತ್ರ

ಓದುಗರ ಪತ್ರ | ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯ ಕಾರ್ಮೋಡ!

೨೦೨೩ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ೧೩೬ ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದಾಗ ಈ ಅವಧಿಯಲ್ಲಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇರುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ದಾಗ ಆ ಭಾವನೆ ಸುಳ್ಳಾಗಿದೆಯೇನೋ ಅನಿಸುತ್ತದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ ಎಂಬುದಕ್ಕೆ ರಾಜಕಾರಣಿಗಳು ಆಗಾಗ್ಗೆ ಏರ್ಪಡಿಸುತ್ತಿರುವ ಡಿನ್ನರ್ ಕೂಟಗಳು, ಸಮಾನ ಮನಸ್ಕರ ಸಭೆಗಳು, ಗುಂಪಿನಲ್ಲಿ ವಿದೇಶಿ ಪ್ರವಾಸ, ರಹಸ್ಯ ಮೀಟಿಂಗ್‌ಗಳು ನಡೆ ಯುತ್ತಿರುವುದು ಸಾಕ್ಷಿಯಾಗಿದೆ.

 

ಇನ್ನೇನು ಕೆಲವೇ ದಿನಗಳಲ್ಲಿ ಕುದುರೆ ವ್ಯಾಪಾರವೂ ಆರಂಭವಾಗಲಿದ್ದು, ರೆಸಾರ್ಟ್ ರಾಜಕಾರಣ ಗರಿಗೆದರ ಬಹುದು ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದೆ. ಈ ರಾಜಕೀಯ ಅಸ್ಥಿರತೆಯ ಕಾರ್ಮೋಡ ರಾಜ್ಯದ ಎರಡೂ ಪ್ರಮುಖ ಪಕ್ಷಗಳಿಗೆ ಅಂಟಿದ್ದು, ಒಂದು ಪಕ್ಷದ ಭಿನ್ನಮತವನ್ನು ಮತ್ತೊಂದು ಪಕ್ಷ ನಗದೀಕರಿಸಿಕೊಳ್ಳುವ ಸ್ಥಿತಿಯಲ್ಲಿರುವುದರಿಂದ ಭಿನ್ನಮತ ತಾರ್ಕಿಕ ಅಂತ್ಯ ಕಾಣಲು ವಿಳಂಬವಾಗಬಹುದು. ಚಲನಚಿತ್ರಗಳ ಕೊನೆಯ ದೃಶ್ಯಾವಳಿಗಳಲ್ಲಿ ಪೊಲೀಸರು ಪ್ರವೇಶಿಸಿದಂತೆ ಈ ಪಕ್ಷಗಳ ವರಿಷ್ಠರು ತಡವಾಗಿ ಪ್ರವೇಶ ಮಾಡುತ್ತಿದ್ದು, ರಾಜ್ಯ ರಾಜಕಾರಣದ ಪರಿಸ್ಥಿತಿ ‘ಕೋಟೆ ಸೂರೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಆಗಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳ ಕಾರ್ಯ ವೈಖರಿ ಕನ್ನಡಿಗರನ್ನು ಭ್ರಮನಿರಸನಗೊಳ್ಳುವಂತೆ ಮಾಡಿದ್ದು, ನಮ್ಮ ರಾಜ್ಯದಲ್ಲೂ ಪ್ರಾದೇಶಿಕ ಪಕ್ಷವೊಂದು ಅಽಕಾರದಲ್ಲಿ ಇರಬಾರದಿತ್ತೇ ಎಂದು ಚಿಂತಿಸುವಂತೆ ಮಾಡಿದೆ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago