ಓದುಗರ ಪತ್ರ

ಓದುಗರ ಪತ್ರ | ಉದ್ಯಾನವನದಲ್ಲಿ ಸ್ವಚ್ಛತೆ ಕಾಪಾಡಿ

ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆಯಾಗಿದ್ದ ಸುಬ್ಬರಾಯನಕೆರೆಯ ಜಾಗದಲ್ಲಿ ನಿರ್ಮಾಣವಾಗಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನ ದುಸ್ಥಿತಿಯತ್ತ ಸಾಗಿದೆ.

ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಉದ್ಯಾನವನದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದು, ರಸ್ತೆ ಕಾಮಗಾರಿ ಸಂದರ್ಭದಲ್ಲಿ ತೆರವಾಗುವ ಕಲ್ಲು,ಮಣ್ಣನ್ನು ಸುರಿಯುವ ತಾಣವಾಗಿ ಮಾರ್ಪಟ್ಟಿದೆ.

ಉದ್ಯಾನದ ಅಕ್ಕಪಕ್ಕದ ನಿವಾಸಿಗಳು ಪ್ರತಿನಿತ್ಯ ಕಸವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಕಟ್ಟಿ ಉದ್ಯಾನದೊಳಗೆ ಎಸೆಯುತ್ತಿರುವುದರಿಂದ ಉದ್ಯಾನವನವೋ ಅಥವಾ ಕಸ ಸುರಿಯುವ ತಾಣವೋ ಎಂಬ ಅನುಮಾನ ಮೂಡುತ್ತಿದೆ.

ಪಾರ್ಕ್‌ನಲ್ಲಿರುವ ಕಾರಂಜಿಗಳು ಹಾಳಾಗಿವೆ. ನೀರು ನಿಂತು ಸೊಳ್ಳೆಗಳು ಹಾಗೂ ನೊಣಗಳ ಹಾವಳಿ ಮಿತಿ ಮೀರಿದೆ. ಪಾರ್ಕ್‌ನಲ್ಲಿ ನಿರ್ಮಿಸಲಾಗಿರುವ ಕುಟೀರಗಳಲ್ಲಿ ನಾಯಿಗಳು ಮಲಗುತ್ತಿದ್ದು, ವಾಯುವಿಹಾರಕ್ಕೆ ಬರುವ ಸಾರ್ವಜನಿಕರಿಗೆ ಕಚ್ಚುವ ಭೀತಿಯುಂಟಾಗಿದೆ. ಬ್ಯಾಸ್ಕೆಟ್ ಬಾಲ್ ಕೋರ್ಟ್ ಪಕ್ಕ ಇರುವ ಪ್ರೇಕ್ಷಕರ ಗ್ಯಾಲರಿ ಯಲ್ಲಿ ಮರಗಳ ಬೊಡ್ಡೆಗಳನ್ನು ಎಸೆಯಲಾಗಿದೆ. ಪಾರ್ಕ್‌ನಲ್ಲಿ ಯಥೇಚ್ಛವಾಗಿ ಹುಲ್ಲು ಬೆಳೆದಿರುವುದರಿಂದ ಸ್ಥಳೀಯರು ತಮ್ಮ ದನಕರುಗಳನ್ನು ಇಲ್ಲಿಗೆ ಪ್ರತಿನಿತ್ಯ ಮೇಯಲು ಬಿಡುತ್ತಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಅಽಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ.

– ಶರತ್, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago