ಓದುಗರ ಪತ್ರ

ಓದುಗರ ಪತ್ರ | ಉದ್ಯಾನವನದಲ್ಲಿ ಸ್ವಚ್ಛತೆ ಕಾಪಾಡಿ

ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆಯಾಗಿದ್ದ ಸುಬ್ಬರಾಯನಕೆರೆಯ ಜಾಗದಲ್ಲಿ ನಿರ್ಮಾಣವಾಗಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನ ದುಸ್ಥಿತಿಯತ್ತ ಸಾಗಿದೆ.

ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಉದ್ಯಾನವನದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದು, ರಸ್ತೆ ಕಾಮಗಾರಿ ಸಂದರ್ಭದಲ್ಲಿ ತೆರವಾಗುವ ಕಲ್ಲು,ಮಣ್ಣನ್ನು ಸುರಿಯುವ ತಾಣವಾಗಿ ಮಾರ್ಪಟ್ಟಿದೆ.

ಉದ್ಯಾನದ ಅಕ್ಕಪಕ್ಕದ ನಿವಾಸಿಗಳು ಪ್ರತಿನಿತ್ಯ ಕಸವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಕಟ್ಟಿ ಉದ್ಯಾನದೊಳಗೆ ಎಸೆಯುತ್ತಿರುವುದರಿಂದ ಉದ್ಯಾನವನವೋ ಅಥವಾ ಕಸ ಸುರಿಯುವ ತಾಣವೋ ಎಂಬ ಅನುಮಾನ ಮೂಡುತ್ತಿದೆ.

ಪಾರ್ಕ್‌ನಲ್ಲಿರುವ ಕಾರಂಜಿಗಳು ಹಾಳಾಗಿವೆ. ನೀರು ನಿಂತು ಸೊಳ್ಳೆಗಳು ಹಾಗೂ ನೊಣಗಳ ಹಾವಳಿ ಮಿತಿ ಮೀರಿದೆ. ಪಾರ್ಕ್‌ನಲ್ಲಿ ನಿರ್ಮಿಸಲಾಗಿರುವ ಕುಟೀರಗಳಲ್ಲಿ ನಾಯಿಗಳು ಮಲಗುತ್ತಿದ್ದು, ವಾಯುವಿಹಾರಕ್ಕೆ ಬರುವ ಸಾರ್ವಜನಿಕರಿಗೆ ಕಚ್ಚುವ ಭೀತಿಯುಂಟಾಗಿದೆ. ಬ್ಯಾಸ್ಕೆಟ್ ಬಾಲ್ ಕೋರ್ಟ್ ಪಕ್ಕ ಇರುವ ಪ್ರೇಕ್ಷಕರ ಗ್ಯಾಲರಿ ಯಲ್ಲಿ ಮರಗಳ ಬೊಡ್ಡೆಗಳನ್ನು ಎಸೆಯಲಾಗಿದೆ. ಪಾರ್ಕ್‌ನಲ್ಲಿ ಯಥೇಚ್ಛವಾಗಿ ಹುಲ್ಲು ಬೆಳೆದಿರುವುದರಿಂದ ಸ್ಥಳೀಯರು ತಮ್ಮ ದನಕರುಗಳನ್ನು ಇಲ್ಲಿಗೆ ಪ್ರತಿನಿತ್ಯ ಮೇಯಲು ಬಿಡುತ್ತಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಅಽಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ.

– ಶರತ್, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

17 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

17 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

17 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago