ಮೈಸೂರಿನ ಸರಸ್ವತಿಪುರಂನಲ್ಲಿರುವ ಸಾರ್ವಜನಿಕ ಉದ್ಯಾನವನದ ಪಕ್ಕದ ಗ್ರಂಥಾಲಯದಲ್ಲಿ ಶೌಚಾಲಯವು ಹದಗೆಟ್ಟು ಹೋಗಿದ್ದು, ಅನೈರ್ಮಲ್ಯ ವಾತಾವರಣದಿಂದಾಗಿ ದುರ್ವಾಸನೆ ಬೀರಲಾರಂಭಿಸಿದೆ.
ಈ ಗ್ರಂಥಾಲಯಕ್ಕೆ ನಿತ್ಯ ನೂರಾರು ಓದುಗರು ಬಂದು ಹೋಗುತ್ತಾರೆ. ಅವರೆಲ್ಲರೂ ಇದೇ ಶೌಚಾಲಯವನ್ನು ಬಳಸಬೇಕು. ಆದರೆ ಈ ಶೌಚಾ ಲಯ ಹದಗೆಟ್ಟು ಹೋಗಿದ್ದು, ಸರಿಯಾದ ನಿರ್ವಹಣೆ ಇಲ್ಲದೆ ದುರ್ವಾಸನೆ ಬೀರಲಾರಂಭಿಸಿದೆ. ಈ ಗ್ರಂಥಾಲಯವಿರುವ ಉದ್ಯಾನವನಕ್ಕೆ ನಿತ್ಯ ಹಿರಿಯರು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು ಬಂದು ಹೋಗು ತ್ತಾರೆ. ಇವರೆಲ್ಲರೂ ಇದೇ ಶೌಚಾಲಯಗಳನ್ನು ಬಳಸಬೇಕು. ಆದರೆ ಶೌಚಾಲಯದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಶೌಚಾಲಯ ಬಳಸಿದರೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈ ಸಂಬಂಧ ಗ್ರಂಥಾಲಯ ಪಾಲಕರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧ ಪಟ್ಟವರು ಈ ಬಗ್ಗೆ ಗಮನಹರಿಸಿ ಶೌಚಾಲಯದ ಸ್ವಚ್ಛತೆ ಕಾಪಾಡಬೇಕಿದೆ. -ಪಂಪಿ, ಬದನವಾಳು, ನಂಜನಗೂಡು ತಾ.
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್ಗಳನ್ನು…
ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…