ಮೈಸೂರಿನ ಸರಸ್ವತಿಪುರಂನಲ್ಲಿರುವ ಸಾರ್ವಜನಿಕ ಉದ್ಯಾನವನದ ಪಕ್ಕದ ಗ್ರಂಥಾಲಯದಲ್ಲಿ ಶೌಚಾಲಯವು ಹದಗೆಟ್ಟು ಹೋಗಿದ್ದು, ಅನೈರ್ಮಲ್ಯ ವಾತಾವರಣದಿಂದಾಗಿ ದುರ್ವಾಸನೆ ಬೀರಲಾರಂಭಿಸಿದೆ.
ಈ ಗ್ರಂಥಾಲಯಕ್ಕೆ ನಿತ್ಯ ನೂರಾರು ಓದುಗರು ಬಂದು ಹೋಗುತ್ತಾರೆ. ಅವರೆಲ್ಲರೂ ಇದೇ ಶೌಚಾಲಯವನ್ನು ಬಳಸಬೇಕು. ಆದರೆ ಈ ಶೌಚಾ ಲಯ ಹದಗೆಟ್ಟು ಹೋಗಿದ್ದು, ಸರಿಯಾದ ನಿರ್ವಹಣೆ ಇಲ್ಲದೆ ದುರ್ವಾಸನೆ ಬೀರಲಾರಂಭಿಸಿದೆ. ಈ ಗ್ರಂಥಾಲಯವಿರುವ ಉದ್ಯಾನವನಕ್ಕೆ ನಿತ್ಯ ಹಿರಿಯರು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು ಬಂದು ಹೋಗು ತ್ತಾರೆ. ಇವರೆಲ್ಲರೂ ಇದೇ ಶೌಚಾಲಯಗಳನ್ನು ಬಳಸಬೇಕು. ಆದರೆ ಶೌಚಾಲಯದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಶೌಚಾಲಯ ಬಳಸಿದರೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈ ಸಂಬಂಧ ಗ್ರಂಥಾಲಯ ಪಾಲಕರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧ ಪಟ್ಟವರು ಈ ಬಗ್ಗೆ ಗಮನಹರಿಸಿ ಶೌಚಾಲಯದ ಸ್ವಚ್ಛತೆ ಕಾಪಾಡಬೇಕಿದೆ. -ಪಂಪಿ, ಬದನವಾಳು, ನಂಜನಗೂಡು ತಾ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…