ಓದುಗರ ಪತ್ರ
ಮಹಾರಾಷ್ಟ್ರದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿನ ಸಿಬ್ಬಂದಿ ಕಡ್ಡಾಯವಾಗಿ ಮರಾಠಿ ಭಾಷೆಯಲ್ಲಿ ಮಾತನಾಡಬೇಕು ಎಂದು ಅಲ್ಲಿನ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಅದು ಇನ್ನೂ ಚರ್ಚೆಯಾಗುತ್ತಿರುವಾಗಲೇ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ರಾಜ್ ಠಾಕ್ರೆಯವರು ಮಹಾರಾಷ್ಟ್ರದಲ್ಲಿ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎಲ್ಲಾ ವ್ಯವಹಾರವನ್ನು ರಾಜ್ಯದ ಅಧಿಕೃತ ಆಡಳಿತ ಭಾಷೆಯಾದ ಮರಾಠಿ ಯಲ್ಲಿ ಮಾಡುವಂತೆ ಕಡ್ಡಾಯಗೊಳಿಸಲು ಆಗ್ರಹಿಸಿದ್ದಾರೆ.
ಅವರು ಹೇಳಿಕೆ ನೀಡಿದ ೨೪ ಗಂಟೆಯೊಳಗಾಗಿ ಮಹಾರಾಷ್ಟ್ರದ ಲೋನವಾಲಾದಲ್ಲಿ ಕೆಲವರು ಬ್ಯಾಂಕ್ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಬ್ಯಾಂಕಿನಲ್ಲಿ ಹಿಂದಿ ಭಾಷೆಯಲ್ಲಿ ವ್ಯವಹರಿಸುವುದನ್ನು ಸಮರ್ಥಿಸಿಕೊಂಡ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ. ಭಾಷೆ ಸೂಕ್ಷ್ಮ ಮತ್ತು ಭಾವನಾತ್ಮಕ ವಿಷಯವಾಗಿದ್ದು, ಅದು ಸಮೂಹ ಸನ್ನಿಯಂತೆ ದೇಶಾದ್ಯಂತ ಹರಡಿ ಈಗಾಗಲೇ ಗೊಂದಲದಲ್ಲಿರುವ ಭಾಷಾ ವಿವಾದವನ್ನು ಹೆಚ್ಚು ಮಾಡುವ ಅಪಾಯವಿದೆ. ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆಗೆ ಆದ್ಯತೆ ಕೊಡದೆ ಹಿಂದಿ ಭಾಷೆಯನ್ನು ರಾಷ್ಟ್ರೀಯತೆ ಹೆಸರಿನಲ್ಲಿ ಹೇರುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. –
ರಮಾನಂದ ಶರ್ಮಾ, ಬೆಂಗಳೂರು
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…