ಓದುಗರ ಪತ್ರ

ಓದುಗರ ಪತ್ರ | ಭಾಷಾ ವಿವಾದ ; ಹೊಸ ತಿರುವು

ಮಹಾರಾಷ್ಟ್ರದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿನ ಸಿಬ್ಬಂದಿ ಕಡ್ಡಾಯವಾಗಿ ಮರಾಠಿ ಭಾಷೆಯಲ್ಲಿ ಮಾತನಾಡಬೇಕು ಎಂದು ಅಲ್ಲಿನ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಅದು ಇನ್ನೂ ಚರ್ಚೆಯಾಗುತ್ತಿರುವಾಗಲೇ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ರಾಜ್ ಠಾಕ್ರೆಯವರು ಮಹಾರಾಷ್ಟ್ರದಲ್ಲಿ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎಲ್ಲಾ ವ್ಯವಹಾರವನ್ನು ರಾಜ್ಯದ ಅಧಿಕೃತ ಆಡಳಿತ ಭಾಷೆಯಾದ ಮರಾಠಿ ಯಲ್ಲಿ ಮಾಡುವಂತೆ ಕಡ್ಡಾಯಗೊಳಿಸಲು ಆಗ್ರಹಿಸಿದ್ದಾರೆ.

ಅವರು ಹೇಳಿಕೆ ನೀಡಿದ ೨೪ ಗಂಟೆಯೊಳಗಾಗಿ ಮಹಾರಾಷ್ಟ್ರದ ಲೋನವಾಲಾದಲ್ಲಿ ಕೆಲವರು ಬ್ಯಾಂಕ್ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಬ್ಯಾಂಕಿನಲ್ಲಿ ಹಿಂದಿ ಭಾಷೆಯಲ್ಲಿ ವ್ಯವಹರಿಸುವುದನ್ನು ಸಮರ್ಥಿಸಿಕೊಂಡ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ. ಭಾಷೆ ಸೂಕ್ಷ್ಮ ಮತ್ತು ಭಾವನಾತ್ಮಕ ವಿಷಯವಾಗಿದ್ದು, ಅದು ಸಮೂಹ ಸನ್ನಿಯಂತೆ ದೇಶಾದ್ಯಂತ ಹರಡಿ ಈಗಾಗಲೇ ಗೊಂದಲದಲ್ಲಿರುವ ಭಾಷಾ ವಿವಾದವನ್ನು ಹೆಚ್ಚು ಮಾಡುವ ಅಪಾಯವಿದೆ. ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆಗೆ ಆದ್ಯತೆ ಕೊಡದೆ ಹಿಂದಿ ಭಾಷೆಯನ್ನು ರಾಷ್ಟ್ರೀಯತೆ ಹೆಸರಿನಲ್ಲಿ ಹೇರುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. –

ರಮಾನಂದ ಶರ್ಮಾ, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

1 hour ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

2 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

12 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

12 hours ago