ಭಾರತ್ ಸಂಚಾರ ನಿಗಮ ನಿಯಮಿತ ೨೦೨೪-೨೫ನೇ ಸಾಲಿನ ೩ನೇ ತ್ರೈಮಾಸಿಕದಲ್ಲಿ ೨೬೨ ಕೋಟಿ ರೂ. ಲಾಭಗಳಿಸಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜಕ್ಕೂ ಸಾಧನೆಯೇ ಸರಿ.
ಬಿಎಸ್ಎನ್ಎಲ್ ೧೭ ವರ್ಷಗಳ ನಂತರ ಲಾಭ ಗಳಿಸುವತ್ತ ಮುಖ ಮಾಡಿರುವುದು ಸಂತೋಷದ ವಿಚಾರ. ಬಿಎಸ್ಎನ್ಎಲ್ ಸಾಕಷ್ಟು ಏಳುಬೀಳುಗಳನ್ನು ಕಂಡಿದೆ. ಖಾಸಗಿ ದೂರ ಸಂಪರ್ಕ ಸಂಸ್ಥೆಗಳೊಂದಿಗೆ ಪೈಪೋಟಿ ನೀಡಲಾಗದೆ ನಿರಂತರವಾಗಿ ನಷ್ಟವನ್ನೇ ಅನುಭವಿಸಿದ ಈ ಸಂಸ್ಥೆ ಮುಂದಿನ ದಿನಗಳಲ್ಲಿ ಮುಚ್ಚಿ ಹೋಗಬಹುದು, ನೌಕರರು ಕೆಲಸ ಕಳೆದುಕೊಳ್ಳಬಹುದು ಎಂಬ ಆತಂಕವಿತ್ತು. ಈ ಆತಂಕದಿಂದಲೇ ಸಾವಿರಾರು ನೌಕರರು ಸ್ವಯಂ ನಿವೃತ್ತಿಯನ್ನೂ ಪಡೆದುಕೊಂಡಿದ್ದರು. ಇಂತಹ ಸಂದರ್ಭದಲ್ಲಿ ಕೆಲ ದೇಶೀಯ ಹಾಗೂ ವಿದೇಶಿ ಟೆಲಿಕಾಂ ಕಂಪೆನಿಗಳು ಬಿಎಸ್ಎನ್ಎಲ್ನ ನೆರವಿಗೆ ಧಾವಿಸಿದ ಪರಿಣಾಮ ಹಾಗೂ ಕೇಂದ್ರ ಸರ್ಕಾರ ಸಾಕಷ್ಟು ಅನುದಾನವನ್ನು ನೀಡಿದ್ದರಿಂದ ಬಿಎಸ್ಎನ್ಎಲ್ ಮರುಹುಟ್ಟು ಪಡೆಯುವಂತಾಯಿತು. ಬಿಎಸ್ಎನ್ಎಲ್ ಈಗ ಲಾಭ ಗಳಿಸುವತ್ತ ಮುನ್ನುಗ್ಗುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಕಂಪೆನಿಯನ್ನು ಕಟ್ಟಿಬೆಳೆಸಿದ ಸಿಬ್ಬಂದಿಗಳಿಗೆ ಅಭಿನಂದನೆಗಳು. -ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…