ಭಾರತ್ ಸಂಚಾರ ನಿಗಮ ನಿಯಮಿತ ೨೦೨೪-೨೫ನೇ ಸಾಲಿನ ೩ನೇ ತ್ರೈಮಾಸಿಕದಲ್ಲಿ ೨೬೨ ಕೋಟಿ ರೂ. ಲಾಭಗಳಿಸಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜಕ್ಕೂ ಸಾಧನೆಯೇ ಸರಿ.
ಬಿಎಸ್ಎನ್ಎಲ್ ೧೭ ವರ್ಷಗಳ ನಂತರ ಲಾಭ ಗಳಿಸುವತ್ತ ಮುಖ ಮಾಡಿರುವುದು ಸಂತೋಷದ ವಿಚಾರ. ಬಿಎಸ್ಎನ್ಎಲ್ ಸಾಕಷ್ಟು ಏಳುಬೀಳುಗಳನ್ನು ಕಂಡಿದೆ. ಖಾಸಗಿ ದೂರ ಸಂಪರ್ಕ ಸಂಸ್ಥೆಗಳೊಂದಿಗೆ ಪೈಪೋಟಿ ನೀಡಲಾಗದೆ ನಿರಂತರವಾಗಿ ನಷ್ಟವನ್ನೇ ಅನುಭವಿಸಿದ ಈ ಸಂಸ್ಥೆ ಮುಂದಿನ ದಿನಗಳಲ್ಲಿ ಮುಚ್ಚಿ ಹೋಗಬಹುದು, ನೌಕರರು ಕೆಲಸ ಕಳೆದುಕೊಳ್ಳಬಹುದು ಎಂಬ ಆತಂಕವಿತ್ತು. ಈ ಆತಂಕದಿಂದಲೇ ಸಾವಿರಾರು ನೌಕರರು ಸ್ವಯಂ ನಿವೃತ್ತಿಯನ್ನೂ ಪಡೆದುಕೊಂಡಿದ್ದರು. ಇಂತಹ ಸಂದರ್ಭದಲ್ಲಿ ಕೆಲ ದೇಶೀಯ ಹಾಗೂ ವಿದೇಶಿ ಟೆಲಿಕಾಂ ಕಂಪೆನಿಗಳು ಬಿಎಸ್ಎನ್ಎಲ್ನ ನೆರವಿಗೆ ಧಾವಿಸಿದ ಪರಿಣಾಮ ಹಾಗೂ ಕೇಂದ್ರ ಸರ್ಕಾರ ಸಾಕಷ್ಟು ಅನುದಾನವನ್ನು ನೀಡಿದ್ದರಿಂದ ಬಿಎಸ್ಎನ್ಎಲ್ ಮರುಹುಟ್ಟು ಪಡೆಯುವಂತಾಯಿತು. ಬಿಎಸ್ಎನ್ಎಲ್ ಈಗ ಲಾಭ ಗಳಿಸುವತ್ತ ಮುನ್ನುಗ್ಗುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಕಂಪೆನಿಯನ್ನು ಕಟ್ಟಿಬೆಳೆಸಿದ ಸಿಬ್ಬಂದಿಗಳಿಗೆ ಅಭಿನಂದನೆಗಳು. -ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…