ಭಾರತ್ ಸಂಚಾರ ನಿಗಮ ನಿಯಮಿತ ೨೦೨೪-೨೫ನೇ ಸಾಲಿನ ೩ನೇ ತ್ರೈಮಾಸಿಕದಲ್ಲಿ ೨೬೨ ಕೋಟಿ ರೂ. ಲಾಭಗಳಿಸಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜಕ್ಕೂ ಸಾಧನೆಯೇ ಸರಿ.
ಬಿಎಸ್ಎನ್ಎಲ್ ೧೭ ವರ್ಷಗಳ ನಂತರ ಲಾಭ ಗಳಿಸುವತ್ತ ಮುಖ ಮಾಡಿರುವುದು ಸಂತೋಷದ ವಿಚಾರ. ಬಿಎಸ್ಎನ್ಎಲ್ ಸಾಕಷ್ಟು ಏಳುಬೀಳುಗಳನ್ನು ಕಂಡಿದೆ. ಖಾಸಗಿ ದೂರ ಸಂಪರ್ಕ ಸಂಸ್ಥೆಗಳೊಂದಿಗೆ ಪೈಪೋಟಿ ನೀಡಲಾಗದೆ ನಿರಂತರವಾಗಿ ನಷ್ಟವನ್ನೇ ಅನುಭವಿಸಿದ ಈ ಸಂಸ್ಥೆ ಮುಂದಿನ ದಿನಗಳಲ್ಲಿ ಮುಚ್ಚಿ ಹೋಗಬಹುದು, ನೌಕರರು ಕೆಲಸ ಕಳೆದುಕೊಳ್ಳಬಹುದು ಎಂಬ ಆತಂಕವಿತ್ತು. ಈ ಆತಂಕದಿಂದಲೇ ಸಾವಿರಾರು ನೌಕರರು ಸ್ವಯಂ ನಿವೃತ್ತಿಯನ್ನೂ ಪಡೆದುಕೊಂಡಿದ್ದರು. ಇಂತಹ ಸಂದರ್ಭದಲ್ಲಿ ಕೆಲ ದೇಶೀಯ ಹಾಗೂ ವಿದೇಶಿ ಟೆಲಿಕಾಂ ಕಂಪೆನಿಗಳು ಬಿಎಸ್ಎನ್ಎಲ್ನ ನೆರವಿಗೆ ಧಾವಿಸಿದ ಪರಿಣಾಮ ಹಾಗೂ ಕೇಂದ್ರ ಸರ್ಕಾರ ಸಾಕಷ್ಟು ಅನುದಾನವನ್ನು ನೀಡಿದ್ದರಿಂದ ಬಿಎಸ್ಎನ್ಎಲ್ ಮರುಹುಟ್ಟು ಪಡೆಯುವಂತಾಯಿತು. ಬಿಎಸ್ಎನ್ಎಲ್ ಈಗ ಲಾಭ ಗಳಿಸುವತ್ತ ಮುನ್ನುಗ್ಗುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಕಂಪೆನಿಯನ್ನು ಕಟ್ಟಿಬೆಳೆಸಿದ ಸಿಬ್ಬಂದಿಗಳಿಗೆ ಅಭಿನಂದನೆಗಳು. -ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…