ಇದೇ ಜುಲೈ ತಿಂಗಳ 12 ರಿಂದ 31ರವರೆಗೆ ಅಂದರೆ 20 ದಿನಗಳ ಕಾಲ ಪ್ರತಿದಿನ ಒಂದು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ.
ರಾಜ್ಯದಲ್ಲಿ ಈಗ ತಾನೆ ಮಳೆ ಪ್ರಾರಂಭವಾಗಿದ್ದು, ಜಲಾಶಯಗಳಿಗೆ ಸ್ವಲ್ಪ ಮಟ್ಟಿಗೆ ನೀರು ಬರುತ್ತಿದೆ. ಇದುವರೆಗೂ ಯಾವುದೇ ಜಲಾಶಯಗಳು ಭರ್ತಿಯಾಗಿಲ್ಲ. ವಾಸ್ತವ ಪರಿಸ್ಥಿತಿ ಗೊತ್ತಿಲ್ಲದೆ ಕಾವೇರಿ ನೀರು ನಿಯಂತ್ರಣ ಸಮಿತಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದೆ. ಇದೇ ರೀತಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಲೇ ಇದೆ. ಎಲ್ಲದಕ್ಕಿಂತಲೂ ಆಶ್ಚರ್ಯಕರ ಸಂಗತಿ ಎಂದರೆ, ತಮಿಳುನಾಡು ಸರ್ಕಾರ ಮೆಟ್ಟೂರು ಜಲಾಶಯದಿಂದ ಕಳೆದ 15 ದಿನಗಳಲ್ಲಿ ಸುಮಾರು 5 ಟಿಎಂಸಿ ನೀರನ್ನು ನದಿಗೆ ಹರಿಸಿದೆ ಎಂದು ಹೇಳಲಾಗುತ್ತಿದೆ.
ಈಗ ತಮಿಳುನಾಡಿಗೆ ನೀರಿನ ಅವಶ್ಯಕತೆ ಇಲ್ಲದೇ ಇದ್ದರೂ ನೀರಿಗಾಗಿ ಬೇಡಿಕೆ ಇಟ್ಟಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಮೊದಲು ವಾಸ್ತವ ಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…