ಇದೇ ಜುಲೈ ತಿಂಗಳ 12 ರಿಂದ 31ರವರೆಗೆ ಅಂದರೆ 20 ದಿನಗಳ ಕಾಲ ಪ್ರತಿದಿನ ಒಂದು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ.
ರಾಜ್ಯದಲ್ಲಿ ಈಗ ತಾನೆ ಮಳೆ ಪ್ರಾರಂಭವಾಗಿದ್ದು, ಜಲಾಶಯಗಳಿಗೆ ಸ್ವಲ್ಪ ಮಟ್ಟಿಗೆ ನೀರು ಬರುತ್ತಿದೆ. ಇದುವರೆಗೂ ಯಾವುದೇ ಜಲಾಶಯಗಳು ಭರ್ತಿಯಾಗಿಲ್ಲ. ವಾಸ್ತವ ಪರಿಸ್ಥಿತಿ ಗೊತ್ತಿಲ್ಲದೆ ಕಾವೇರಿ ನೀರು ನಿಯಂತ್ರಣ ಸಮಿತಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದೆ. ಇದೇ ರೀತಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಲೇ ಇದೆ. ಎಲ್ಲದಕ್ಕಿಂತಲೂ ಆಶ್ಚರ್ಯಕರ ಸಂಗತಿ ಎಂದರೆ, ತಮಿಳುನಾಡು ಸರ್ಕಾರ ಮೆಟ್ಟೂರು ಜಲಾಶಯದಿಂದ ಕಳೆದ 15 ದಿನಗಳಲ್ಲಿ ಸುಮಾರು 5 ಟಿಎಂಸಿ ನೀರನ್ನು ನದಿಗೆ ಹರಿಸಿದೆ ಎಂದು ಹೇಳಲಾಗುತ್ತಿದೆ.
ಈಗ ತಮಿಳುನಾಡಿಗೆ ನೀರಿನ ಅವಶ್ಯಕತೆ ಇಲ್ಲದೇ ಇದ್ದರೂ ನೀರಿಗಾಗಿ ಬೇಡಿಕೆ ಇಟ್ಟಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಮೊದಲು ವಾಸ್ತವ ಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…