ಓದುಗರ ಪತ್ರ

ಓದುಗರ ಪತ್ರ| ಸದನದಲ್ಲಿ ಜ್ವಲಂತ ಸಮಸ್ಯೆಗಳ ಚರ್ಚೆಯಾಗಲಿ

ಜುಲೈ 15ರಂದು ಆರಂಭಗೊಂಡಿರುವ ರಾಜ್ಯ ವಿಧಾನಮಂಡಲ ಅಧಿವೇಶನ ಜು.26ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿದೆ.

ಇತ್ತೀಚಿನ ದಿನಗಳಲ್ಲಿ ವಿಧಾನ ಮಂಡಲ ಅಧಿವೇಶನಗಳಲ್ಲಿ ಕೇವಲ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವಿನ
ಜಟಾಪಟಿಯೇ ಹೆಚ್ಚಾಗಿರುತ್ತದೆ. ಒಬ್ಬರ ಮೇಲೊಬ್ಬರು ಆರೋಪ, ಪ್ರತ್ಯಾರೋಪಗಳನ್ನು ಮಾಡಿಕೊಂಡು ಕಾಲಹರಣ ಮಾಡುತ್ತಾರೆ. ಸದನದಲ್ಲಿ ಗದ್ದಲವೇ ಹೆಚ್ಚಾಗಿರುವುದಲ್ಲದೇ ಪ್ರತಿಪಕಗಳು ಸಭಾತ್ಯಾಗ ಮಾಡಿಕೊಂಡು ಸದನದ ಸಮಯ ಹಾಳು ಮಾಡುತ್ತವೆ. ಈ ಬಾರಿಯ ವಿಧಾನಮಂಡಲ ಅಧಿವೇಶನದಲ್ಲಿಯೂ ಹೀಗಾಗುವುದು ಬೇಡ. ಸದನದ ಹೆಚ್ಚಿನ ಸಮಯವನ್ನು ಸಾರ್ವಜನಿಕರ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಗೆ ಮೀಸಲಿಡಬೇಕಿದೆ. ಎಲ್ಲ ವಿಚಾರಗಳಿಗೂ ಏರುದ್ಧನಿಯಲ್ಲಿ ಕಿರುಚಾಡುತ್ತಾ ಜಗಳವಾಡುವುದು, ಪರಸ್ಪರ ನಿಂದನೆ ಮಾಡುವುದನ್ನು ಬಿಟ್ಟು, ಆಡಳಿತ ಪಕವು ತನ್ನ ಮುಂದಿನ ಯೋಜನೆಗಳ ಬಗ್ಗೆ ತಿಳಿಸುವ ಹಾಗೂ ವಿಪಕಗಳು ಸರ್ಕಾರದ ತಪ್ಪುಗಳನ್ನು ತಿದ್ದುವ ಪ್ರಯತ ಮಾಡಬೇಕು. ಆ ಮೂಲಕ ಸದನದಲ್ಲಿ ಆರೋಗ್ಯಕರ ಚರ್ಚೆಯಾಗಬೇಕು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago