ಓದುಗರ ಪತ್ರ
ಕರ್ನಾಟಕ ವಿಧಾನಸಭೆ ಹಾಗೂ ಸಂಸತ್ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಮುಂದೆ ಏನು ಯೋಜನೆಗಳು ಜಾರಿಯಾಗಬೇಕು.ಯಾವ ಯೋಜನೆಗಳು ಬಿಟ್ಟು ಹೋಗಿವೆ, ಏನು ಲೋಪಗಳಿವೆ ಎಂಬ ಬಗ್ಗೆ ಚರ್ಚೆಯಾಗಬೇಕು. ಆದರೆ ಇತ್ತ ಕರ್ನಾಟಕದ ವಿಧಾನ ಸಭೆ ಬಜೆಟ್ ಅಧಿವೇಶನದಲ್ಲಿ ಆಡಳಿತ ಪಕ್ಷದ ಸದಸ್ಯರು ತಮ್ಮ ಮುಖ್ಯ ಮಂತ್ರಿ ಮಂಡಿಸಿದ ದಾಖಲೆ 17ನೇ ಬಜೆಟ್ ಎಂದು ಬಜೆಟ್ನಲ್ಲಿ ಇರುವ ವಿಷಯಗಳನ್ನು ಹೊಗಳುವುದು ನಡೆದರೆ ಅತ್ತ ಲೋಕಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು ಕೇವಲ ಪ್ರಧಾನಿಯವರನ್ನು ಹೊಗಳುವುದು, ಈಗಾಗಲೇ ಆಗಿರುವ ಯೋಜನೆಗಳನ್ನು ಉಲ್ಲೇಖಿಸಿ ಪ್ರಸ್ತಾಪ ಮಾಡುವುದರಲ್ಲೇ ಕಾಲಹರಣಮಾಡುತ್ತಿದ್ದಾರೆ. ಇದು ತಪ್ಪಬೇಕು. ಬಜೆಟ್ನಲ್ಲಿ ಆಗಬೇಕಿರುವ ಯೋಜನೆಗಳು, ಅವುಗಳ ಅನುಷ್ಠಾನದ ಬಗ್ಗೆ ಚರ್ಚೆಯಾಗಬೇಕು.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…