ಓದುಗರ ಪತ್ರ
ಡಿಸೆಂಬರ್ ೩೧ರಂದು ಹೊಸ ವರ್ಷದ ಆಚರಣೆಯ ಪ್ರಯುಕ್ತ ಯುವ ಸಮೂಹ ಮದ್ಯದ ಕೂಟದಲ್ಲಿ ಮುಳುಗಿ ಹೋಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಒಂದೇ ದಿನ ಈ ಬಾರಿ ದಾಖಲೆಯ ೩೦೫ ಕೋಟಿ ರೂ. ಮದ್ಯ ಮಾರಾಟವಾಗಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲು ಎನ್ನಲಾಗುತ್ತಿದೆ. ಡಿಸೆಂಬರ್ ೩೧ರ ರಾತ್ರಿ ಮದ್ಯದ ಕೂಟಗಳು ಎಷ್ಟರಮಟ್ಟಿಗೆ ಜರುಗಿದವು ಎಂದರೆ ಜನವರಿ ೧ರಂದು ಯಾವುದೇ ಪಾರ್ಕ್, ಕೆರೆ, ಹಿನ್ನೀರಿನ ಪ್ರದೇಶಗಳನ್ನು ನೋಡಿದರೂ ಮದ್ಯದ ಬಾಟಲಿಗಳೇ ತುಂಬಿ ಹೋಗಿದ್ದವು. ಇನ್ನು ಕೆಲ ರಸ್ತೆ ಬದಿಗಳಲ್ಲಂತೂ ಇಂದಿಗೂ ಕುಡಿದು ಬಿಸಾಡಿದ ಗಾಜಿನ ಬಾಟಲಿಗಳು ಹರಡಿಕೊಂಡಿವೆ. ಇತ್ತೀಚಿನ ದಿನಗಳಲ್ಲಿ ಗಾಜಿನ ಬಾಟಲಿಗಳನ್ನು ಪುನರ್ಬಳಕೆಗೆ ಯಾರೂ ತೆಗೆದುಕೊಳ್ಳದ ಕಾರಣ, ಚಿಂದಿ ಸಂಗ್ರಹಿಸುವವರೂ ಈ ಬಾಟಲಿಗಳನ್ನು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಗಾಜಿನ ಬಾಟಲಿಗಳು ರಸ್ತೆ ಬದಿಯಲ್ಲಿ, ಪಾರ್ಕ್ಗಳಲ್ಲೇ ಬಿದ್ದಿವೆ. ಇದರಿಂದಾಗಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಮದ್ಯ ಮಾರಾಟದಿಂದ ಅಽಕ ಆದಾಯ ಪಡೆಯುತ್ತಿರುವ ರಾಜ್ಯ ಸರ್ಕಾರ ಮದ್ಯದ ಬಾಟಲಿಗಳ ಪುನರ್ಬಳಕೆಯ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮದ್ಯದ ಬಾಟಲಿಗಳ ವಿಲೆವಾರಿಯೇ ರಾಜ್ಯ ಸರ್ಕಾರಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಲಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ,
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…