ಓದುಗರ ಪತ್ರ

ಓದುಗರ ಪತ್ರ | ‘ಅನ್ನಪೂರ್ಣ ಯೋಜನೆ’ ಜಾರಿಯಾಗಲಿ

ದೇಶದಲ್ಲಿ ಕೇಂದ್ರ ಸರ್ಕಾರದ ‘ಅನ್ನಪೂರ್ಣ ಯೋಜನೆ’ಯಡಿ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ತಲಾ ೧೦ ಕೆ. ಜಿ. ಅಕ್ಕಿ ನೀಡಲಾಗುತ್ತಿದ್ದು, ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಹಿರಿಯ ನಾಗರಿಕರ ಮಾಹಿತಿ ನೀಡದ ಪರಿಣಾಮ ಕರ್ನಾಟಕದಲ್ಲಿ ಈ ಯೋಜನೆ ಇನ್ನೂ ಜಾರಿಯಾಗಿಲ್ಲ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದ್ದಾರೆ.

‘ಅನ್ನಪೂರ್ಣ ಯೋಜನೆ’ ದೇಶದ ಹಲವು ರಾಜ್ಯಗಳಲ್ಲಿ ಜಾರಿಯಾಗಿದೆ. ಕರ್ನಾಟಕದಲ್ಲಿರುವ ಹಿರಿಯ ನಾಗರಿಕರ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಿದರೆ ಈ ಯೋಜನೆ ಕರ್ನಾಟಕದಲ್ಲಿಯೂ ಜಾರಿಯಾಗಿ ಹಲವರು ಈ ಯೋಜನೆಯ ಲಾಭ ಪಡೆದುಕೊಳ್ಳುತ್ತಾರೆ.

ಇನ್ನು ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ತಲಾ ೧೦ ಕೆ. ಜಿ. ಅಕ್ಕಿ ನೀಡುವ ಭರವಸೆ ನೀಡಿತ್ತು. ಆದರೆ ಕೇಂದ್ರದಿಂದ ಅಕ್ಕಿ ಪೂರೈಕೆಯಾಗದ ಪರಿಣಾಮ ೧೦ ಕೆ. ಜಿ. ಅಕ್ಕಿಯ ಬದಲು ೫ ಕೆ. ಜಿ. ಅಕ್ಕಿ ನೀಡುತ್ತಿದ್ದು, ಉಳಿದ ೫ ಕೆ. ಜಿ. ಯ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತಿದೆ. ಸದ್ಯ ರಾಜ್ಯದಲ್ಲಿ ತಲಾ ೧೦ ಕೆ. ಜಿ. ಅಕ್ಕಿ ಪೂರೈಕೆ ಮಾಡಲು ೪೮ ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯವಿದ್ದು, ರಾಜ್ಯದಲ್ಲಿಯೇ ೫೦ ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನೆಯಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಜನರಿಗೆ ಉಚಿತವಾಗಿ ಅಕ್ಕಿ ನೀಡುವ ಇಚ್ಛಾಶಕ್ತಿ ಇದ್ದರೆ ನೇರವಾಗಿ ರೈತರಿಂದಲೇ ಅಕ್ಕಿ ಖರೀದಿಸಿ ಪೂರೈಕೆ ಮಾಡಬಹುದಲ್ಲವೇ? -ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

 

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

3 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

7 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

7 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

8 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

8 hours ago