ದೇಶದಲ್ಲಿ ಕೇಂದ್ರ ಸರ್ಕಾರದ ‘ಅನ್ನಪೂರ್ಣ ಯೋಜನೆ’ಯಡಿ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ತಲಾ ೧೦ ಕೆ. ಜಿ. ಅಕ್ಕಿ ನೀಡಲಾಗುತ್ತಿದ್ದು, ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಹಿರಿಯ ನಾಗರಿಕರ ಮಾಹಿತಿ ನೀಡದ ಪರಿಣಾಮ ಕರ್ನಾಟಕದಲ್ಲಿ ಈ ಯೋಜನೆ ಇನ್ನೂ ಜಾರಿಯಾಗಿಲ್ಲ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದ್ದಾರೆ.
‘ಅನ್ನಪೂರ್ಣ ಯೋಜನೆ’ ದೇಶದ ಹಲವು ರಾಜ್ಯಗಳಲ್ಲಿ ಜಾರಿಯಾಗಿದೆ. ಕರ್ನಾಟಕದಲ್ಲಿರುವ ಹಿರಿಯ ನಾಗರಿಕರ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಿದರೆ ಈ ಯೋಜನೆ ಕರ್ನಾಟಕದಲ್ಲಿಯೂ ಜಾರಿಯಾಗಿ ಹಲವರು ಈ ಯೋಜನೆಯ ಲಾಭ ಪಡೆದುಕೊಳ್ಳುತ್ತಾರೆ.
ಇನ್ನು ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ತಲಾ ೧೦ ಕೆ. ಜಿ. ಅಕ್ಕಿ ನೀಡುವ ಭರವಸೆ ನೀಡಿತ್ತು. ಆದರೆ ಕೇಂದ್ರದಿಂದ ಅಕ್ಕಿ ಪೂರೈಕೆಯಾಗದ ಪರಿಣಾಮ ೧೦ ಕೆ. ಜಿ. ಅಕ್ಕಿಯ ಬದಲು ೫ ಕೆ. ಜಿ. ಅಕ್ಕಿ ನೀಡುತ್ತಿದ್ದು, ಉಳಿದ ೫ ಕೆ. ಜಿ. ಯ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತಿದೆ. ಸದ್ಯ ರಾಜ್ಯದಲ್ಲಿ ತಲಾ ೧೦ ಕೆ. ಜಿ. ಅಕ್ಕಿ ಪೂರೈಕೆ ಮಾಡಲು ೪೮ ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯವಿದ್ದು, ರಾಜ್ಯದಲ್ಲಿಯೇ ೫೦ ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನೆಯಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಜನರಿಗೆ ಉಚಿತವಾಗಿ ಅಕ್ಕಿ ನೀಡುವ ಇಚ್ಛಾಶಕ್ತಿ ಇದ್ದರೆ ನೇರವಾಗಿ ರೈತರಿಂದಲೇ ಅಕ್ಕಿ ಖರೀದಿಸಿ ಪೂರೈಕೆ ಮಾಡಬಹುದಲ್ಲವೇ? -ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…