ಓದುಗರ ಪತ್ರ| ಎಟಿಎಂ ೨೪ ಗಂಟೆಗಳೂ ಕಾರ್ಯನಿರ್ವಹಿಸಲಿ

ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್‌ಪೋಸ್ಟ್‌ನಲ್ಲಿರುವ ಎಸ್‌ಬಿಐ ಬ್ಯಾಂಕಿನ ಎಟಿಎಂ ದಿನದ ಬಹುತೇಕ ಸಮಯದಲ್ಲಿ ಮುಚ್ಚಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಹ್ಯಾಂಡ್‌ಪೋಸ್ಟ್ ಎಚ್. ಡಿ. ಕೋಟೆ ಮತ್ತು ಸರಗೂರು ತಾಲ್ಲೂಕುಗಳಿಗೆ ಕೇಂದ್ರ ಬಿಂದುವಾ ಗಿದ್ದು, ಎರಡೂ ತಾಲ್ಲೂಕುಗಳ ಜನರು ಸೇರಿದಂತೆ ನೆರೆಯ ಕೇರಳ ರಾಜ್ಯದಿಂದಲೂ ಇಲ್ಲಿಗೆ ವ್ಯವಹಾರ ಉದ್ದೇಶಕ್ಕಾಗಿ ಜನರು ಬಂದು ಹೋಗುತ್ತಾರೆ. ಜತೆಗೆ ಎಚ್. ಡಿ. ಕೋಟೆ ಈಗ ಪ್ರವಾಸೋದ್ಯಮ ಕೇಂದ್ರವಾಗಿಯೂ ರೂಪುಗೊಳ್ಳುತ್ತಿದ್ದು, ನಿತ್ಯ ನೂರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಎಟಿಎಂಗಳು ದಿನದ ೨೪ ಗಂಟೆಗಳ ಕಾಲ ಕಾರ್ಯನಿರ್ವಹಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ.

ಆದರೆ ಸರ್ಕಲ್ ಸಮೀಪದಲ್ಲೇ ಇರುವ ಎಸ್‌ಬಿಐ ಬ್ಯಾಂಕಿನ ಎಟಿಎಂ ದಿನದ ಬಹುತೇಕ ಸಮಯದಲ್ಲಿ ಮುಚ್ಚೇ ಇರುತ್ತದೆ. ಕೆಲ ದಿನಗಳಂತೂ ತಾಂತ್ರಿಕ ಸಮಸ್ಯೆಯಿಂದಾಗಿಯೂ ಎಟಿಎಂಗೆ ಬೀಗ ಹಾಕಲಾಗಿರುತ್ತದೆ. ಇದರಿಂದಾಗಿ ಸಾರ್ವಜನಿಕರು ಹಣ ಪಡೆದುಕೊಳ್ಳಲು ಖಾಸಗಿ ಬ್ಯಾಂಕುಗಳ ಎಟಿಎಂ ಮೊರೆ ಹೋಗಬೇಕಾಗಿದ್ದು, ಅಧಿಕ ಶುಲ್ಕ ಪಾವತಿಸಿ ಹಣ ವಿತ್‌ಡ್ರಾ ಮಾಡಬೇಕಾಗಿದೆ. ಆದ್ದರಿಂದ ಹ್ಯಾಂಡ್‌ಪೋಸ್ಟ್‌ನ ಎಸ್‌ಬಿಎಂ ಬ್ಯಾಂಕ್ ವ್ಯವಸ್ಥಾಪಕರು ಈ ಬಗ್ಗೆ ಗಮನಹರಿಸಿ ದಿನದ ೨೪ ಗಂಟೆಗಳ ಕಾಲವೂ ಎಟಿಎಂ ಕಾರ್ಯನಿರ್ವಹಿಸುವಂತೆ ಮಾಡಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಾಷ್ಟ್ರಕವಿ ಕುವೆಂಪು ಕಟ್ಟಿದ ಸಂವಿಧಾನ ಸ್ವಾಗತ ಗೀತೆ

ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…

21 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಚಲನ ಮೂಡಿಸಿದ ಬಿಜೆಪಿ-ಜಾ.ದಳ ಮೈತ್ರಿ ವಿಚಾರ

ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ  ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…

35 mins ago

ಆಟಿಕೆ ಮಾರಾಟಗಾರರ ಸುರಕ್ಷತೆಗೆ ಸರ್ಕಾರಗಳು ಮುಂದಾಗಲಿ

2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…

1 hour ago

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

2 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

3 hours ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

5 hours ago