ಓದುಗರ ಪತ್ರ| ಎಟಿಎಂ ೨೪ ಗಂಟೆಗಳೂ ಕಾರ್ಯನಿರ್ವಹಿಸಲಿ

ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್‌ಪೋಸ್ಟ್‌ನಲ್ಲಿರುವ ಎಸ್‌ಬಿಐ ಬ್ಯಾಂಕಿನ ಎಟಿಎಂ ದಿನದ ಬಹುತೇಕ ಸಮಯದಲ್ಲಿ ಮುಚ್ಚಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಹ್ಯಾಂಡ್‌ಪೋಸ್ಟ್ ಎಚ್. ಡಿ. ಕೋಟೆ ಮತ್ತು ಸರಗೂರು ತಾಲ್ಲೂಕುಗಳಿಗೆ ಕೇಂದ್ರ ಬಿಂದುವಾ ಗಿದ್ದು, ಎರಡೂ ತಾಲ್ಲೂಕುಗಳ ಜನರು ಸೇರಿದಂತೆ ನೆರೆಯ ಕೇರಳ ರಾಜ್ಯದಿಂದಲೂ ಇಲ್ಲಿಗೆ ವ್ಯವಹಾರ ಉದ್ದೇಶಕ್ಕಾಗಿ ಜನರು ಬಂದು ಹೋಗುತ್ತಾರೆ. ಜತೆಗೆ ಎಚ್. ಡಿ. ಕೋಟೆ ಈಗ ಪ್ರವಾಸೋದ್ಯಮ ಕೇಂದ್ರವಾಗಿಯೂ ರೂಪುಗೊಳ್ಳುತ್ತಿದ್ದು, ನಿತ್ಯ ನೂರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಎಟಿಎಂಗಳು ದಿನದ ೨೪ ಗಂಟೆಗಳ ಕಾಲ ಕಾರ್ಯನಿರ್ವಹಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ.

ಆದರೆ ಸರ್ಕಲ್ ಸಮೀಪದಲ್ಲೇ ಇರುವ ಎಸ್‌ಬಿಐ ಬ್ಯಾಂಕಿನ ಎಟಿಎಂ ದಿನದ ಬಹುತೇಕ ಸಮಯದಲ್ಲಿ ಮುಚ್ಚೇ ಇರುತ್ತದೆ. ಕೆಲ ದಿನಗಳಂತೂ ತಾಂತ್ರಿಕ ಸಮಸ್ಯೆಯಿಂದಾಗಿಯೂ ಎಟಿಎಂಗೆ ಬೀಗ ಹಾಕಲಾಗಿರುತ್ತದೆ. ಇದರಿಂದಾಗಿ ಸಾರ್ವಜನಿಕರು ಹಣ ಪಡೆದುಕೊಳ್ಳಲು ಖಾಸಗಿ ಬ್ಯಾಂಕುಗಳ ಎಟಿಎಂ ಮೊರೆ ಹೋಗಬೇಕಾಗಿದ್ದು, ಅಧಿಕ ಶುಲ್ಕ ಪಾವತಿಸಿ ಹಣ ವಿತ್‌ಡ್ರಾ ಮಾಡಬೇಕಾಗಿದೆ. ಆದ್ದರಿಂದ ಹ್ಯಾಂಡ್‌ಪೋಸ್ಟ್‌ನ ಎಸ್‌ಬಿಎಂ ಬ್ಯಾಂಕ್ ವ್ಯವಸ್ಥಾಪಕರು ಈ ಬಗ್ಗೆ ಗಮನಹರಿಸಿ ದಿನದ ೨೪ ಗಂಟೆಗಳ ಕಾಲವೂ ಎಟಿಎಂ ಕಾರ್ಯನಿರ್ವಹಿಸುವಂತೆ ಮಾಡಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ ಜೂನಿಯರ್‌ ಎನ್‌ಟಿಆರ್‌ ನೋಡಲು ಮುಗಿಬಿದ್ದ ಅಭಿಮಾನಿಗಳು

ಬೆಂಗಳೂರು: ಖ್ಯಾತ ನಟ ಜೂನಿಯರ್‌ ಎನ್‌ಟಿಆರ್‌ ಅವರಿಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆಸ್ಪತ್ರೆಯೊಂದರ ಉದ್ಘಾಟನೆಗೆ…

5 mins ago

ರಾಮನಗರ: ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…

1 hour ago

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ…

2 hours ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

3 hours ago

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…

3 hours ago