ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್ಪೋಸ್ಟ್ನಲ್ಲಿರುವ ಎಸ್ಬಿಐ ಬ್ಯಾಂಕಿನ ಎಟಿಎಂ ದಿನದ ಬಹುತೇಕ ಸಮಯದಲ್ಲಿ ಮುಚ್ಚಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಹ್ಯಾಂಡ್ಪೋಸ್ಟ್ ಎಚ್. ಡಿ. ಕೋಟೆ ಮತ್ತು ಸರಗೂರು ತಾಲ್ಲೂಕುಗಳಿಗೆ ಕೇಂದ್ರ ಬಿಂದುವಾ ಗಿದ್ದು, ಎರಡೂ ತಾಲ್ಲೂಕುಗಳ ಜನರು ಸೇರಿದಂತೆ ನೆರೆಯ ಕೇರಳ ರಾಜ್ಯದಿಂದಲೂ ಇಲ್ಲಿಗೆ ವ್ಯವಹಾರ ಉದ್ದೇಶಕ್ಕಾಗಿ ಜನರು ಬಂದು ಹೋಗುತ್ತಾರೆ. ಜತೆಗೆ ಎಚ್. ಡಿ. ಕೋಟೆ ಈಗ ಪ್ರವಾಸೋದ್ಯಮ ಕೇಂದ್ರವಾಗಿಯೂ ರೂಪುಗೊಳ್ಳುತ್ತಿದ್ದು, ನಿತ್ಯ ನೂರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಎಟಿಎಂಗಳು ದಿನದ ೨೪ ಗಂಟೆಗಳ ಕಾಲ ಕಾರ್ಯನಿರ್ವಹಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ.
ಆದರೆ ಸರ್ಕಲ್ ಸಮೀಪದಲ್ಲೇ ಇರುವ ಎಸ್ಬಿಐ ಬ್ಯಾಂಕಿನ ಎಟಿಎಂ ದಿನದ ಬಹುತೇಕ ಸಮಯದಲ್ಲಿ ಮುಚ್ಚೇ ಇರುತ್ತದೆ. ಕೆಲ ದಿನಗಳಂತೂ ತಾಂತ್ರಿಕ ಸಮಸ್ಯೆಯಿಂದಾಗಿಯೂ ಎಟಿಎಂಗೆ ಬೀಗ ಹಾಕಲಾಗಿರುತ್ತದೆ. ಇದರಿಂದಾಗಿ ಸಾರ್ವಜನಿಕರು ಹಣ ಪಡೆದುಕೊಳ್ಳಲು ಖಾಸಗಿ ಬ್ಯಾಂಕುಗಳ ಎಟಿಎಂ ಮೊರೆ ಹೋಗಬೇಕಾಗಿದ್ದು, ಅಧಿಕ ಶುಲ್ಕ ಪಾವತಿಸಿ ಹಣ ವಿತ್ಡ್ರಾ ಮಾಡಬೇಕಾಗಿದೆ. ಆದ್ದರಿಂದ ಹ್ಯಾಂಡ್ಪೋಸ್ಟ್ನ ಎಸ್ಬಿಎಂ ಬ್ಯಾಂಕ್ ವ್ಯವಸ್ಥಾಪಕರು ಈ ಬಗ್ಗೆ ಗಮನಹರಿಸಿ ದಿನದ ೨೪ ಗಂಟೆಗಳ ಕಾಲವೂ ಎಟಿಎಂ ಕಾರ್ಯನಿರ್ವಹಿಸುವಂತೆ ಮಾಡಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…