ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್ಪೋಸ್ಟ್ನಲ್ಲಿರುವ ಎಸ್ಬಿಐ ಬ್ಯಾಂಕಿನ ಎಟಿಎಂ ದಿನದ ಬಹುತೇಕ ಸಮಯದಲ್ಲಿ ಮುಚ್ಚಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಹ್ಯಾಂಡ್ಪೋಸ್ಟ್ ಎಚ್. ಡಿ. ಕೋಟೆ ಮತ್ತು ಸರಗೂರು ತಾಲ್ಲೂಕುಗಳಿಗೆ ಕೇಂದ್ರ ಬಿಂದುವಾ ಗಿದ್ದು, ಎರಡೂ ತಾಲ್ಲೂಕುಗಳ ಜನರು ಸೇರಿದಂತೆ ನೆರೆಯ ಕೇರಳ ರಾಜ್ಯದಿಂದಲೂ ಇಲ್ಲಿಗೆ ವ್ಯವಹಾರ ಉದ್ದೇಶಕ್ಕಾಗಿ ಜನರು ಬಂದು ಹೋಗುತ್ತಾರೆ. ಜತೆಗೆ ಎಚ್. ಡಿ. ಕೋಟೆ ಈಗ ಪ್ರವಾಸೋದ್ಯಮ ಕೇಂದ್ರವಾಗಿಯೂ ರೂಪುಗೊಳ್ಳುತ್ತಿದ್ದು, ನಿತ್ಯ ನೂರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಎಟಿಎಂಗಳು ದಿನದ ೨೪ ಗಂಟೆಗಳ ಕಾಲ ಕಾರ್ಯನಿರ್ವಹಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ.
ಆದರೆ ಸರ್ಕಲ್ ಸಮೀಪದಲ್ಲೇ ಇರುವ ಎಸ್ಬಿಐ ಬ್ಯಾಂಕಿನ ಎಟಿಎಂ ದಿನದ ಬಹುತೇಕ ಸಮಯದಲ್ಲಿ ಮುಚ್ಚೇ ಇರುತ್ತದೆ. ಕೆಲ ದಿನಗಳಂತೂ ತಾಂತ್ರಿಕ ಸಮಸ್ಯೆಯಿಂದಾಗಿಯೂ ಎಟಿಎಂಗೆ ಬೀಗ ಹಾಕಲಾಗಿರುತ್ತದೆ. ಇದರಿಂದಾಗಿ ಸಾರ್ವಜನಿಕರು ಹಣ ಪಡೆದುಕೊಳ್ಳಲು ಖಾಸಗಿ ಬ್ಯಾಂಕುಗಳ ಎಟಿಎಂ ಮೊರೆ ಹೋಗಬೇಕಾಗಿದ್ದು, ಅಧಿಕ ಶುಲ್ಕ ಪಾವತಿಸಿ ಹಣ ವಿತ್ಡ್ರಾ ಮಾಡಬೇಕಾಗಿದೆ. ಆದ್ದರಿಂದ ಹ್ಯಾಂಡ್ಪೋಸ್ಟ್ನ ಎಸ್ಬಿಎಂ ಬ್ಯಾಂಕ್ ವ್ಯವಸ್ಥಾಪಕರು ಈ ಬಗ್ಗೆ ಗಮನಹರಿಸಿ ದಿನದ ೨೪ ಗಂಟೆಗಳ ಕಾಲವೂ ಎಟಿಎಂ ಕಾರ್ಯನಿರ್ವಹಿಸುವಂತೆ ಮಾಡಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…