ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ. ೧ರಂದು ಮಂಡಿಸಿದ ವಾರ್ಷಿಕ ಬಜೆಟ್ನಲ್ಲಿ ವಿಮಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿದೇಶಿ ವಿಮಾ ಕಂಪೆನಿಗಳಿಗೆ ಅನುಕೂಲವಾಗುವಂತೆ ಬಜೆಟ್ ತಯಾರಿಸಿದ್ದಾರೆ ಅನಿಸುತ್ತದೆ.
ಈ ಬಾರಿಯ ಬಜೆಟ್ನಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಈಗಿರುವ ಶೇ. ೭೪ರ ಬದಲು ಶೇ. ೧೦೦ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ಅಂದರೆ ವಿಮಾ ವಲಯದಲ್ಲಿ ಪೂರ್ಣ ಪ್ರಮಾಣದಲ್ಲಿ ನೇರವಾಗಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಸರ್ಕಾರ ಅನುಮತಿ ನೀಡಿದಂತಾಗುತ್ತದೆ. ಇದು ಈಗಾಗಲೇ ಸರ್ಕಾರಿ ಸ್ವಾಮ್ಯದಲ್ಲಿರುವ ವಿಮಾ ವಲಯಕ್ಕೆ ತೊಂದರೆಯನ್ನುಂಟು ಮಾಡಲಿದೆ.
ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿಗಳು ನಷ್ಟ ಹೊಂದಲು ಹಾಗೂ ವಿದೇಶಿ ವಿಮಾ ಕಂಪೆನಿಗಳು ಲಾಭ ಪಡೆಯಲು ಸರ್ಕಾರವೇ ಪರೋಕ್ಷವಾಗಿ ಸಹಕಾರ ನೀಡುತ್ತಿದೆಯೇನೋ ಅನಿಸುತ್ತದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರು ಈ ಬಗ್ಗೆ ಮರುಪರಿಶೀಲಿಸಿ ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿಗಳಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ರೂಪಿಸಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…