ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ. ೧ರಂದು ಮಂಡಿಸಿದ ವಾರ್ಷಿಕ ಬಜೆಟ್ನಲ್ಲಿ ವಿಮಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿದೇಶಿ ವಿಮಾ ಕಂಪೆನಿಗಳಿಗೆ ಅನುಕೂಲವಾಗುವಂತೆ ಬಜೆಟ್ ತಯಾರಿಸಿದ್ದಾರೆ ಅನಿಸುತ್ತದೆ.
ಈ ಬಾರಿಯ ಬಜೆಟ್ನಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಈಗಿರುವ ಶೇ. ೭೪ರ ಬದಲು ಶೇ. ೧೦೦ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ಅಂದರೆ ವಿಮಾ ವಲಯದಲ್ಲಿ ಪೂರ್ಣ ಪ್ರಮಾಣದಲ್ಲಿ ನೇರವಾಗಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಸರ್ಕಾರ ಅನುಮತಿ ನೀಡಿದಂತಾಗುತ್ತದೆ. ಇದು ಈಗಾಗಲೇ ಸರ್ಕಾರಿ ಸ್ವಾಮ್ಯದಲ್ಲಿರುವ ವಿಮಾ ವಲಯಕ್ಕೆ ತೊಂದರೆಯನ್ನುಂಟು ಮಾಡಲಿದೆ.
ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿಗಳು ನಷ್ಟ ಹೊಂದಲು ಹಾಗೂ ವಿದೇಶಿ ವಿಮಾ ಕಂಪೆನಿಗಳು ಲಾಭ ಪಡೆಯಲು ಸರ್ಕಾರವೇ ಪರೋಕ್ಷವಾಗಿ ಸಹಕಾರ ನೀಡುತ್ತಿದೆಯೇನೋ ಅನಿಸುತ್ತದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರು ಈ ಬಗ್ಗೆ ಮರುಪರಿಶೀಲಿಸಿ ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿಗಳಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ರೂಪಿಸಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…