ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ. ೧ರಂದು ಮಂಡಿಸಿದ ವಾರ್ಷಿಕ ಬಜೆಟ್ನಲ್ಲಿ ವಿಮಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿದೇಶಿ ವಿಮಾ ಕಂಪೆನಿಗಳಿಗೆ ಅನುಕೂಲವಾಗುವಂತೆ ಬಜೆಟ್ ತಯಾರಿಸಿದ್ದಾರೆ ಅನಿಸುತ್ತದೆ.
ಈ ಬಾರಿಯ ಬಜೆಟ್ನಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಈಗಿರುವ ಶೇ. ೭೪ರ ಬದಲು ಶೇ. ೧೦೦ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ಅಂದರೆ ವಿಮಾ ವಲಯದಲ್ಲಿ ಪೂರ್ಣ ಪ್ರಮಾಣದಲ್ಲಿ ನೇರವಾಗಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಸರ್ಕಾರ ಅನುಮತಿ ನೀಡಿದಂತಾಗುತ್ತದೆ. ಇದು ಈಗಾಗಲೇ ಸರ್ಕಾರಿ ಸ್ವಾಮ್ಯದಲ್ಲಿರುವ ವಿಮಾ ವಲಯಕ್ಕೆ ತೊಂದರೆಯನ್ನುಂಟು ಮಾಡಲಿದೆ.
ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿಗಳು ನಷ್ಟ ಹೊಂದಲು ಹಾಗೂ ವಿದೇಶಿ ವಿಮಾ ಕಂಪೆನಿಗಳು ಲಾಭ ಪಡೆಯಲು ಸರ್ಕಾರವೇ ಪರೋಕ್ಷವಾಗಿ ಸಹಕಾರ ನೀಡುತ್ತಿದೆಯೇನೋ ಅನಿಸುತ್ತದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರು ಈ ಬಗ್ಗೆ ಮರುಪರಿಶೀಲಿಸಿ ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿಗಳಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ರೂಪಿಸಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…