ಓದುಗರ ಪತ್ರ

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು ಭಾರತದ ಮೊದಲ ಡಿಜಿಟಲ್ ಜನಗಣತಿಯಾಗಿರುವುದು ವಿಶೇಷವಾಗಿದೆ. ಗಣತಿದಾರರು ತಮ್ಮ ಸ್ವಂತ ಮೊಬೈಲ್ ಫೋನ್ ಬಳಸಿ ಮೊಬೈಲ್ ಆಪ್‌ನಿಂದ ಕುಟುಂಬಗಳಿಂದ ಡಿಜಿಟಲ್ ರೂಪದಲ್ಲಿ ಮಾಹಿತಿಗಳನ್ನು ಸಂಗ್ರಹಿಸಲು ಪ್ರೋತ್ಸಾಹಿಸಲಾಗುತ್ತಿದೆ. ಏ. ೧ ರಿಂದ ಏ. ೧೫ ರವರೆಗೆ ಸ್ವಯಂಗಣತಿಗೆ ಅವಕಾಶ ಕಲ್ಪಿಸಲಾಗಿದ್ದು, ೧೫ ರಿಂದ ೨೦ ನಿಮಿಷಗಳಲ್ಲಿ ತಮ್ಮ ಮನೆಯ ಸ್ವಂತ ಗಣತಿಯನ್ನು ಮಾಡಿಕೊಂಡು ಸ್ವಯಂ ಗಣತಿಯ ಗುರುತಿನ ಸಂಖ್ಯೆ ಪಡೆದುಕೊಂಡು ಏ. ೧೬ರಿಂದ ಮೇ ೧೫ರವರೆಗೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ ವಿಶೇಷ ಸಂಖ್ಯೆ ನೀಡಿ ಗಣಿತಿದಾರರ ಗಣತಿ ಕಾರ್ಯವನ್ನು ಸರಳಗೊಳಿಸಿ ಯಶಸ್ವಿಗೊಳಿಸಲು ಎಲ್ಲರೂ ನೆರವಾಗಬೇಕಿದೆ.

ಜನಗಣತಿಯಲ್ಲಿ ಸಂಗ್ರಹಿಸುವ ಮಾಹಿತಿ, ಹೆಸರು, ಗುರುತನ್ನು ಗೌಪ್ಯವಾಗಿ ಇರಿಸಲಾಗುತ್ತದೆ. ಯಾವುದೇ ತೆರಿಗೆ ಅಥವಾ ಪರಿಶೋಧನೆ ಉದ್ದೇಶಕ್ಕೆ ದತ್ತಾಂಶವನ್ನು ಬಳಸಿಕೊಳ್ಳುವುದಿಲ್ಲ . ಇದು ಸುರಕ್ಷಿತವಾಗಿರುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ಗಣತಿದಾರರು ತಮ್ಮ ಮನೆಗೆ ಬಂದಾಗ ಮಾಹಿತಿದಾರರು ಸಂಶಯ ಪಡದೇ ಗಣತಿದಾರರು ಕೇಳುವ ೩೪ ಸರಳ ಪ್ರಶ್ನೆಗಳಿಗೆ ಪಾರದರ್ಶಕತೆ ಹಾಗೂ ವಾಸ್ತವಾಂಶದೊಂದಿಗೆ ಮಾಹಿತಿ ನೀಡಬೇಕಿದೆ. ಗಣತಿದಾರರು ಕೂಡ ಬೇರೆ ಯಾವುದೇ ಪ್ರಶ್ನೆಗಳನ್ನು ಕೇಳಿ, ಕಿರಿಕಿರಿಗೊಳಿಸದೆ ಸರಿಯಾದ ಮಾಹಿತಿಯನ್ನು ದಾಖಲಿಸಿಕೊಂಡು ಈ ಬಾರಿಯ ಜನಗಣತಿಯನ್ನು ಯಶಸ್ವಿಗೊಳಿಸುವುದು ಅಗತ್ಯವಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

2 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

3 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

4 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

4 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

12 hours ago