ಓದುಗರ ಪತ್ರ

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು ಭಾರತದ ಮೊದಲ ಡಿಜಿಟಲ್ ಜನಗಣತಿಯಾಗಿರುವುದು ವಿಶೇಷವಾಗಿದೆ. ಗಣತಿದಾರರು ತಮ್ಮ ಸ್ವಂತ ಮೊಬೈಲ್ ಫೋನ್ ಬಳಸಿ ಮೊಬೈಲ್ ಆಪ್‌ನಿಂದ ಕುಟುಂಬಗಳಿಂದ ಡಿಜಿಟಲ್ ರೂಪದಲ್ಲಿ ಮಾಹಿತಿಗಳನ್ನು ಸಂಗ್ರಹಿಸಲು ಪ್ರೋತ್ಸಾಹಿಸಲಾಗುತ್ತಿದೆ. ಏ. ೧ ರಿಂದ ಏ. ೧೫ ರವರೆಗೆ ಸ್ವಯಂಗಣತಿಗೆ ಅವಕಾಶ ಕಲ್ಪಿಸಲಾಗಿದ್ದು, ೧೫ ರಿಂದ ೨೦ ನಿಮಿಷಗಳಲ್ಲಿ ತಮ್ಮ ಮನೆಯ ಸ್ವಂತ ಗಣತಿಯನ್ನು ಮಾಡಿಕೊಂಡು ಸ್ವಯಂ ಗಣತಿಯ ಗುರುತಿನ ಸಂಖ್ಯೆ ಪಡೆದುಕೊಂಡು ಏ. ೧೬ರಿಂದ ಮೇ ೧೫ರವರೆಗೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ ವಿಶೇಷ ಸಂಖ್ಯೆ ನೀಡಿ ಗಣಿತಿದಾರರ ಗಣತಿ ಕಾರ್ಯವನ್ನು ಸರಳಗೊಳಿಸಿ ಯಶಸ್ವಿಗೊಳಿಸಲು ಎಲ್ಲರೂ ನೆರವಾಗಬೇಕಿದೆ.

ಜನಗಣತಿಯಲ್ಲಿ ಸಂಗ್ರಹಿಸುವ ಮಾಹಿತಿ, ಹೆಸರು, ಗುರುತನ್ನು ಗೌಪ್ಯವಾಗಿ ಇರಿಸಲಾಗುತ್ತದೆ. ಯಾವುದೇ ತೆರಿಗೆ ಅಥವಾ ಪರಿಶೋಧನೆ ಉದ್ದೇಶಕ್ಕೆ ದತ್ತಾಂಶವನ್ನು ಬಳಸಿಕೊಳ್ಳುವುದಿಲ್ಲ . ಇದು ಸುರಕ್ಷಿತವಾಗಿರುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ಗಣತಿದಾರರು ತಮ್ಮ ಮನೆಗೆ ಬಂದಾಗ ಮಾಹಿತಿದಾರರು ಸಂಶಯ ಪಡದೇ ಗಣತಿದಾರರು ಕೇಳುವ ೩೪ ಸರಳ ಪ್ರಶ್ನೆಗಳಿಗೆ ಪಾರದರ್ಶಕತೆ ಹಾಗೂ ವಾಸ್ತವಾಂಶದೊಂದಿಗೆ ಮಾಹಿತಿ ನೀಡಬೇಕಿದೆ. ಗಣತಿದಾರರು ಕೂಡ ಬೇರೆ ಯಾವುದೇ ಪ್ರಶ್ನೆಗಳನ್ನು ಕೇಳಿ, ಕಿರಿಕಿರಿಗೊಳಿಸದೆ ಸರಿಯಾದ ಮಾಹಿತಿಯನ್ನು ದಾಖಲಿಸಿಕೊಂಡು ಈ ಬಾರಿಯ ಜನಗಣತಿಯನ್ನು ಯಶಸ್ವಿಗೊಳಿಸುವುದು ಅಗತ್ಯವಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

9 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

21 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

23 hours ago