ಓದುಗರ ಪತ್ರ

ಓದುಗರ ಪತ್ರ | ದಸರಾ ಪಾಸ್ ಜನಸಾಮಾನ್ಯರಿಗೆ ಮೊದಲು ಸಿಗಲಿ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು ಸಾರ್ವಜನಿಕರಿಗೆ ಲಭ್ಯವಾಗುವ ಮೊದಲೇ ಶೇ.70ರಷ್ಟನ್ನು ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು ಪಾಸ್‌ ಗಳಿಗಾಗಿ ಪರದಾಡುವಂತಾಗಿದೆ.

ಕಳೆದ ಕೆಲ ವರ್ಷಗಳಿಂದ ಈ ರಾಜಕಾರಣಿಗಳ ಹಾವಳಿ ವಿಪರೀತವಾಗಿದೆ. ಅರಮನೆ ಅಂಗಳದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜಂಬೂ ಸವಾರಿಯ ವೀಕ್ಷಣೆಗೆ ಪಾಸ್‌ಗಳನ್ನು ಖರೀದಿಸಲು ಸಾರ್ವಜನಿಕರು ಹರಸಾಹಸ ಪಡಬೇಕಾಗಿದೆ. ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಒಬ್ಬೊಬ್ಬರೂ 500ರಿಂದ 1000 ಪಾಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು ಪಾಸ್ ಕೇಳಿದರೆ ಅಧಿಕಾರಿಗಳಿಂದ ಇಲ್ಲ ಎಂಬ ಉತ್ತರ ಬರುತ್ತಿದೆ. ಇನ್ನು ದಸರಾ ಕಾರ್ಯಕ್ರಮಗಳಿಗೆ ಚುನಾಯಿತ ಪ್ರತಿನಿಧಿಗಳ ಜತೆ ಅವರ ಬೆಂಬಲಿಗರೂ ಗುಂಪು ಗುಂಪಾಗಿ ಆಗಮಿಸುತ್ತಿದ್ದು, ವೇದಿಕೆಯನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರು ನೆಮದಿಯಿಂದ ಕುಳಿತು ಕಾರ್ಯಕ್ರಮಗಳನ್ನು ವೀಕ್ಷಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಈ ಬಾರಿಯಾದರೂ ದಸರಾದಲ್ಲಿ ಇಂತಹ ಸಮಸ್ಯೆಗಳು ಉದ್ಭವಿಸದಂತೆ ಎಚ್ಚರ ವಹಿಸಬೇಕಿದೆ.

-ಜಾಕೀರ್ ಖಾನ್‌, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago