ಓದುಗರ ಪತ್ರ

ಓದುಗರ ಪತ್ರ |ಮೀನು ಮಾರಾಟ ಕೇಂದ್ರ ಸ್ಥಳಾಂತರಗೊಳ್ಳಲಿ

ಮೈಸೂರಿನ ಕೆಆರ್.ಎಸ್ ರಸ್ತೆಯಲ್ಲಿರುವ ಆಕಾಶವಾಣಿ ಕೇಂದ್ರದ ಮುಖ್ಯ ದ್ವಾರದ ಮುಂಭಾಗ ಹಾಗೂ ಚಲುವಾಂಬ ಪಾರ್ಕ್‌ಗೆ ಹೊಂದಿಕೊಂಡಂತೆ ಇರುವ ಮೀನು ಮಾರಾಟ ಕೇಂದ್ರದಿಂದಾಗಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ.

ಈ ಮೀನು ಮಾರಾಟ ಕೇಂದ್ರದ ಹಿಂಭಾ ಗವೇ ಚಲುವಾಂಬ ಪಾರ್ಕ್ ಇದೆ. ಅಲ್ಲದೆ ಆಕಾಶವಾಣಿ ಕೇಂದ್ರದ ವಾತಾವರಣವೂ ಸುಂದರವಾಗಿದೆ. ಹೀಗಾಗಿಯೇ ಸಂಜೆಯಾಗುತ್ತಲೇ ಇಲ್ಲಿ ಹಿರಿಯ ನಾಗರಿಕರು, ಮಹಿಳೆಯರು ವಾಕಿಂಗ್ ಮಾಡುತ್ತಾರೆ. ಆದರೆ, ಈ ಮೀನು ಕೇಂದ್ರದ ತ್ಯಾಜ್ಯವನ್ನು ಬೀದಿನಾಯಿಗಳು ಪಾರ್ಕ್‌ ಹಾಗೂ ಆಕಾಶವಾಣಿ ಸಮೀಪ ಬೀಸಾಡುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣ ವಾಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇಲ್ಲಿ ಮೈಸೂರು ಮಹಾನಗರ ಪಾಲಿಕೆಯವರು ಪಾದಚಾರಿ ಮಾರ್ಗದಮೇಲೆಯೇ ಮೀನು ಮಾರಾಟ ಕೇಂದ್ರಕ್ಕೆ ಅನುಮತಿ ನೀಡಿರುವುದು ಸರಿಯಲ್ಲ, ಕುವೆಂಪುನಗರದ ಕಾಂಪ್ಲೆಕ್ಸ್ ಬಳಿಯು ಇದೇ ಸಮಸ್ಯೆ ಎದುರಾಗಿದೆ. ಆದ್ದರಿಂದ ಮಹಾನಗರ ಪಾಲಿಕೆ ಈ ಬಗ್ಗೆ ಗಮನಹರಿಸಿ ಪಾರ್ಕ್‌ಗಳ ಸಮೀಪವಿರುವ ಮೀನು ಮಾರಾಟ ಕೇಂದ್ರಗಳನ್ನು ಸ್ಥಳಾಂತರಿಸಬೇಕು.

-ಬೂತನಕೆರೆ ವಿಜೇಂದ್ರ, ಮೈಸೂರು,

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

3 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

5 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

6 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

6 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

6 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

6 hours ago