ಮೈಸೂರಿನ ಕೆಆರ್.ಎಸ್ ರಸ್ತೆಯಲ್ಲಿರುವ ಆಕಾಶವಾಣಿ ಕೇಂದ್ರದ ಮುಖ್ಯ ದ್ವಾರದ ಮುಂಭಾಗ ಹಾಗೂ ಚಲುವಾಂಬ ಪಾರ್ಕ್ಗೆ ಹೊಂದಿಕೊಂಡಂತೆ ಇರುವ ಮೀನು ಮಾರಾಟ ಕೇಂದ್ರದಿಂದಾಗಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ.
ಈ ಮೀನು ಮಾರಾಟ ಕೇಂದ್ರದ ಹಿಂಭಾ ಗವೇ ಚಲುವಾಂಬ ಪಾರ್ಕ್ ಇದೆ. ಅಲ್ಲದೆ ಆಕಾಶವಾಣಿ ಕೇಂದ್ರದ ವಾತಾವರಣವೂ ಸುಂದರವಾಗಿದೆ. ಹೀಗಾಗಿಯೇ ಸಂಜೆಯಾಗುತ್ತಲೇ ಇಲ್ಲಿ ಹಿರಿಯ ನಾಗರಿಕರು, ಮಹಿಳೆಯರು ವಾಕಿಂಗ್ ಮಾಡುತ್ತಾರೆ. ಆದರೆ, ಈ ಮೀನು ಕೇಂದ್ರದ ತ್ಯಾಜ್ಯವನ್ನು ಬೀದಿನಾಯಿಗಳು ಪಾರ್ಕ್ ಹಾಗೂ ಆಕಾಶವಾಣಿ ಸಮೀಪ ಬೀಸಾಡುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣ ವಾಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇಲ್ಲಿ ಮೈಸೂರು ಮಹಾನಗರ ಪಾಲಿಕೆಯವರು ಪಾದಚಾರಿ ಮಾರ್ಗದಮೇಲೆಯೇ ಮೀನು ಮಾರಾಟ ಕೇಂದ್ರಕ್ಕೆ ಅನುಮತಿ ನೀಡಿರುವುದು ಸರಿಯಲ್ಲ, ಕುವೆಂಪುನಗರದ ಕಾಂಪ್ಲೆಕ್ಸ್ ಬಳಿಯು ಇದೇ ಸಮಸ್ಯೆ ಎದುರಾಗಿದೆ. ಆದ್ದರಿಂದ ಮಹಾನಗರ ಪಾಲಿಕೆ ಈ ಬಗ್ಗೆ ಗಮನಹರಿಸಿ ಪಾರ್ಕ್ಗಳ ಸಮೀಪವಿರುವ ಮೀನು ಮಾರಾಟ ಕೇಂದ್ರಗಳನ್ನು ಸ್ಥಳಾಂತರಿಸಬೇಕು.
-ಬೂತನಕೆರೆ ವಿಜೇಂದ್ರ, ಮೈಸೂರು,
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…