ಮೈಸೂರಿನ ಕೆಆರ್.ಎಸ್ ರಸ್ತೆಯಲ್ಲಿರುವ ಆಕಾಶವಾಣಿ ಕೇಂದ್ರದ ಮುಖ್ಯ ದ್ವಾರದ ಮುಂಭಾಗ ಹಾಗೂ ಚಲುವಾಂಬ ಪಾರ್ಕ್ಗೆ ಹೊಂದಿಕೊಂಡಂತೆ ಇರುವ ಮೀನು ಮಾರಾಟ ಕೇಂದ್ರದಿಂದಾಗಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ.
ಈ ಮೀನು ಮಾರಾಟ ಕೇಂದ್ರದ ಹಿಂಭಾ ಗವೇ ಚಲುವಾಂಬ ಪಾರ್ಕ್ ಇದೆ. ಅಲ್ಲದೆ ಆಕಾಶವಾಣಿ ಕೇಂದ್ರದ ವಾತಾವರಣವೂ ಸುಂದರವಾಗಿದೆ. ಹೀಗಾಗಿಯೇ ಸಂಜೆಯಾಗುತ್ತಲೇ ಇಲ್ಲಿ ಹಿರಿಯ ನಾಗರಿಕರು, ಮಹಿಳೆಯರು ವಾಕಿಂಗ್ ಮಾಡುತ್ತಾರೆ. ಆದರೆ, ಈ ಮೀನು ಕೇಂದ್ರದ ತ್ಯಾಜ್ಯವನ್ನು ಬೀದಿನಾಯಿಗಳು ಪಾರ್ಕ್ ಹಾಗೂ ಆಕಾಶವಾಣಿ ಸಮೀಪ ಬೀಸಾಡುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣ ವಾಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇಲ್ಲಿ ಮೈಸೂರು ಮಹಾನಗರ ಪಾಲಿಕೆಯವರು ಪಾದಚಾರಿ ಮಾರ್ಗದಮೇಲೆಯೇ ಮೀನು ಮಾರಾಟ ಕೇಂದ್ರಕ್ಕೆ ಅನುಮತಿ ನೀಡಿರುವುದು ಸರಿಯಲ್ಲ, ಕುವೆಂಪುನಗರದ ಕಾಂಪ್ಲೆಕ್ಸ್ ಬಳಿಯು ಇದೇ ಸಮಸ್ಯೆ ಎದುರಾಗಿದೆ. ಆದ್ದರಿಂದ ಮಹಾನಗರ ಪಾಲಿಕೆ ಈ ಬಗ್ಗೆ ಗಮನಹರಿಸಿ ಪಾರ್ಕ್ಗಳ ಸಮೀಪವಿರುವ ಮೀನು ಮಾರಾಟ ಕೇಂದ್ರಗಳನ್ನು ಸ್ಥಳಾಂತರಿಸಬೇಕು.
-ಬೂತನಕೆರೆ ವಿಜೇಂದ್ರ, ಮೈಸೂರು,
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…