ಸಮಾಜದಲ್ಲಿ ಎಲ್ಲ ಜನರೂ ಬಡವ, ಬಲ್ಲಿದ ವ್ಯತ್ಯಾಸ ಇಲ್ಲದೆ ಬದುಕುವಂತಾಗಬೇಕು. ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನತೆ ಇರಬೇಕು ಎಂದು ಪರಿಭಾವಿಸಿದ ಯುವಜನರು ಜನಪ್ರತಿನಿಧಿಗಳಲ್ಲಿ ನಂಬಿಕೆ ಕಳೆದುಕೊಂಡು, ಹೋರಾಟದ ದಾರಿಯನ್ನು ಆಯ್ದುಕೊಳ್ಳುವ ಮೂಲಕ ನಕ್ಸಲೈಟ್ಗಳಾಗಿದ್ದಾರೆ. ಇದೀಗ ಆರು ಮಂದಿ ನಕ್ಸಲರು ಶರಣಾಗತಿಯಾಗುವ ಮೂಲಕ ಮುಖ್ಯವಾಹಿನಿಗೆ ಸೇರಿದ್ದಾರೆ. ಸರ್ಕಾರ ಇವರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು.
ಸದ್ಯಕ್ಕೆ ನ್ಯಾಯಾಂಗ ಬಂಧನದಲ್ಲಿರುವ ಆರೂ ಜನರು, ಶಿಕ್ಷೆ ಅನುಭವಿಸಿ ಹಿಂದಿರುಗಿದ ನಂತರ ಭ್ರಮನಿರಸನಕ್ಕೊಳಗಾಗದಂತೆ ಎಚ್ಚರವಹಿಸಬೇಕು. ಅವರಿಗೆ ಪುನರ್ವಸತಿ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕಾಗುತ್ತದೆ. ಇಲ್ಲದಿದ್ದರೆ, ಅವರಿಂದ ಸ್ಛೂರ್ತಿಗೊಂಡಿರಬಹುದಾದ ಯುವಜನರು ನಕ್ಸಲಿಸಂ ಹಾದಿ ತುಳಿಯಬಹುದು. ಹಾಗಾಗಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಅತ್ಯಂತ ಸೂಕ್ಷ ವಾಗಿ ಹೆಜ್ಜೆ ಇಡಬೇಕು.
-ಎಸ್.ಚಂದ್ರಚೂಡ, ಸರಸ್ವತಿಪುರಂ, ಮೈಸೂರು
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…